ಏಕಾಏಕಿ ಬಿರುಗಾಳಿ: ಗ್ರಾಮದಲ್ಲಿ ಮನೆಗಳಿಗೆ ಭಾರೀ ಹಾನಿ
Sudden storm: Heavy damage to houses in the village
ಲೋಕದರ್ಶನ ವರದಿ
ಮುಂಡಗೋಡ 26 : ತಾಲೂಕಿನ ಮೈನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳಿಬೆಳಕು ಗ್ರಾಮದಲ್ಲಿ ಶನಿವಾರ ಸಂಜೆ ಬೀಸಿದ ಭಾರೀ ಗಾಳಿ ಅಬ್ಬರಕ್ಕೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಬಿರುಗಾಳಿಯ ತೀವ್ರತೆಗೆ ಮನೆಗಳ ಮೇಲ್ಛಾವಣಿಗಳು ಹಾರಿಹೋಗಿ, ಮರಗಳು ಮನೆಗಳ ಮೇಲೆ ಉರುಳಿಬಿದ್ದು ಭಾರೀ ಹಾನಿ ಉಂಟಾಗಿದೆ. ಪ್ರಕಾಶ್ ಅತೋನಿ ಸಿದ್ದಿ ಅವರ ಮನೆಯ ಮೇಲೆ ದೊಡ್ಡ ನಂದಿ ಮರ ಬಿದ್ದು, ಮನೆಯ ಮೇಲ್ಛಾವಣಿ ಸಂಪೂರ್ಣವಾಗಿ ಕುಸಿದುಹೋಗಿದೆ. ಮನೆಯೊಳಗಿನ ಸಾಮಗ್ರಿಗಳು ಹಾನಿಗೊಳಗಾಗಿದ್ದು, ಗೋಡೆಗಳಿಗೂ ಹಾನಿ ಉಂಟಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮನೆ ಮೇಲ್ಛಾವಣಿಯ ಟೈಲುಗಳು ಚದುರಿಹೋಗಿ ಅವಶೇಷಗಳ ರಾಶಿ ಕಾಣಿಸಿಕೊಂಡಿದೆ. ಗಾಳಿಯ ತೀವ್ರತೆಗೆ ಸುತ್ತಮುತ್ತಲಿನ ಪರಿಸರವೇ ಅಸ್ತವ್ಯಸ್ತಗೊಂಡಿದೆ. ಈ ಪ್ರಕೃತಿ ವಿಕೋಪದಿಂದ ಸುಮಾರು ಮನೆ ಮಾಲೀಕನಿಗೆ ?50,000 ಕ್ಕೂ ಹೆಚ್ಚು ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳೀಯರು ತಕ್ಷಣ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಪರಿಹಾರ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿ, ಶೀಘ್ರ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 