ಜೈವಿಕ ಇಂಧನ ಸಂಶೋಧನೆ ಮಾಹಿತಿ, ಪ್ರಾತ್ಯಕ್ಷಿಕೆ ಕೇಂದ್ರಕ್ಕೆ ಸುಧೀಂದ್ರ ಭೇಟಿ
Sudhindra visits Biofuel Research Information, Demonstration Centre
ಜೈವಿಕ ಇಂಧನ ಸಂಶೋಧನೆ ಮಾಹಿತಿ, ಪ್ರಾತ್ಯಕ್ಷಿಕೆ ಕೇಂದ್ರಕ್ಕೆ ಸುಧೀಂದ್ರ ಭೇಟಿ
ಬೆಳಗಾವಿ,18: ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಎಸ್. ಈ . ಸುಧೀಂದ್ರ ಅವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ವತಿಯಿಂದ ಸ್ಥಾಪಿಸಲಾಗಿರುವ ಜೈವಿಕ ಇಂಧನ ಸಂಶೋಧನೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕೇಂದ್ರಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ವಿದ್ಯಾಶಂಕರ ಎಸ್., ಅವರು ಅಧ್ಯಕ್ಷರನ್ನು ಸನ್ಮಾನಿಸಿದರು ಮತ್ತು ವಿಶ್ವವಿದ್ಯಾನಿಲಯದ ಜೈವಿಕ ಇಂಧನ ಯೋಜನೆಗಳು ಮತ್ತು ಅದರ ಶೈಕ್ಷಣಿಕ ಉಪಕ್ರಮಗಳ ಅವಲೋಕನವನ್ನು ಒದಗಿಸಿದರು.
ಜೈವಿಕ ಇಂಧನ ಸಂಶೋಧನೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕೇಂದ್ರದಲ್ಲಿ ಕೇಂದ್ರದ ಸಂಯೋಜಕರಾದ ಡಾ. ನಾಗರಾಜ ಎಸ. ಪಾಟೀಲ್ ಅವರು ಕೇಂದ್ರದ ಜೈವಿಕ ಇಂಧನ ಬೀಜ ಸಂಗ್ರಹಣೆ, ಬಯೋಡೀಸೆಲ್ ಉತ್ಪಾದನೆ ಹಾಗೂ ವಾಹನಗಳಲ್ಲಿ ಬಳಕೆ ಕುರಿತು ವಿವರಿಸಿದರು. ಮಂಡಳಿಯ ಅಧ್ಯಕ್ಷರು ಕೇಂದ್ರದ ಕಾರ್ಯ ಚಟುವಟಿಕೆಗಳನ್ನು ವೀಕ್ಷಿಸಿ ಕೇಂದ್ರವು ಕೈಗೊಂಡಿರುವ ಜೈವಿಕ ಇಂಧನ ಅಭಿವೃದ್ಧಿಯ ಕಾರ್ಯಕ್ರಮಗಳನ್ನು ಶ್ಲಾಘಿಸಿದರು. ಮಂಡಳಿಯು ಹೊಸ ಜೈವಿಕ ಇಂಧನ ನೀತಿಯನ್ನು ಅಭಿವೃದ್ಧಿಪಡಿಸುವ ಪ್ರಕ್ರಿಯೆಯಲ್ಲಿದೆ ಎಂದು ಅಧ್ಯಕ್ಷರು ವ್ಯಕ್ತಪಡಿಸಿದ್ದಾರೆ.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 