ಧಾರವಾಡ 24: ಇಲ್ಲಿಯ ಜೆ.ಎಸ್.ಎಸ್. ಡಾ. ಡಿ.ವೀರೇಂದ್ರ ಹೆಗ್ಗಡೆ ಸಂಶೋಧನ ಕೇಂದ್ರದ ಮೂಲಕ ಕನ್ನಡ ವಿಷಯದಲ್ಲಿ ‘ಹೊಸ ತಲೆಮಾರಿನ ಕನ್ನಡ ಕಾವ್ಯದಲ್ಲಿ ಸ್ತ್ರೀ ನಿರ್ವಚನ’ ಎಂಬ ವಿಷಯ ಕುರಿತು ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ್ದ ಸುಮಾ ಸಾವಂತ ವಸಂತ ಇವರ ಸಂಶೋಧನ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿಎಚ್.ಡಿ. ಪದವಿಯನ್ನು ಪ್ರದಾನ ಮಾಡಿದೆ.
ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಡಾ. ಅಜಿತಪ್ರಸಾದ ಅವರು ಹಾಗೂ ಜೆ.ಎಸ್.ಎಸ್. ಡಾ. ಡಿ.ವೀರೇಂದ್ರ ಹೆಗ್ಗಡೆ ಸಂಶೋಧನ ಕೇಂದ್ರದ ಸಂಯೋಜನಾಧಿಕಾರಿಯಾದ ಡಾ. ಜಿನದತ್ತ ಅ. ಹಡಗಲಿ ಅವರು ಅಭಿನಂದಿಸಿದ್ದಾರೆ. ಇವರಿಗೆ ಹುಬ್ಬಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ. ವೈ.ಎಮ್. ಭಜಂತ್ರಿ ಅವರು ಮಾರ್ಗದರ್ಶಕರಾಗಿದ್ದರು.