ಮಕ್ಕಳ ಮನೋವಿಕಾಸಕ್ಕೆ ಬೇಸಿಗೆ ಶಿಬಿರ ಸಹಕಾರಿ : ಶ್ರೀಕಾಂತ ದುಂಡಿಗೌಡ್ರ
Summer camp helps in children's mental development: Srikanth Dundigowdra
ಮಕ್ಕಳ ಮನೋವಿಕಾಸಕ್ಕೆ ಬೇಸಿಗೆ ಶಿಬಿರ ಸಹಕಾರಿ : ಶ್ರೀಕಾಂತ ದುಂಡಿಗೌಡ್ರ
ಶಿಗ್ಗಾವಿ 11 : ಬೇಸಿಗೆ ಶಿಬಿರವು ಮಕ್ಕಳಿಗೆ ಹಲವು ರೀತಿಯ ಕಲೆ,ಕ್ರೀಡೆ,ಸಂಗೀತ,ನೃತ್ಯ ನಾಟಕಗಳ ಮೂಲಕ ಮಕ್ಕಳ ಮನೋವಿಕಾಸಕ್ಕೆ ಬೇಸಿಗೆ ಶಿಬಿರ ಸಹಕಾರಿಯಾಗುತ್ತದೆ ಎಂದು ಭಾರತ ಸೇವಾ ಸಂಸ್ಥೆಯ ಅಧ್ಯಕ್ಷರಾದ ಶ್ರೀಕಾಂತ ದುಂಡಿಗೌಡ್ರ ಹೇಳಿದರು. ಪಟ್ಟಣದ ತಾಲೂಕ ಕ್ರೀಡಾಂಗಣದಲ್ಲಿ ಭಾರತ ಸೇವಾ ಸಂಸ್ಥೆ ಬನ್ನೂರ ವತಿಯಿಂದ ಆಯೋಜಿಸಿರುವ ಉಚಿತ ಬೇಸಿಗೆ ಶಿಬಿರ ಉದ್ದೇಶಿಸಿ ಮಾತನಾಡಿದ ಶಿಬಿರದಿಂದ ಮಕ್ಕಳಲ್ಲಿನ ಆತ್ಮವಿಶ್ವಾಸ ದ್ವಿಗುಣಗೊಳ್ಳುತ್ತದೆ.ಬೇರೆಯವರೊಡನೆ ಬೆರೆಯುವ ಮೂಲಕ ಮಕ್ಕಳ ಸಾಮಾಜಿಕ ಕೌಶಲ್ಯಗಳು ಅಭಿವೃದ್ದಿಯಾಗಿ ಶಿಸ್ತು ಮತ್ತು ಸಮಯ ಪಾಲನೆಯ ಮಹತ್ವವನ್ನು ಮಕ್ಕಳು ಕಲಿಯುತ್ತಾರೆ ಎಂದರು. ಶಿಬಿರ ಉದ್ಘಾಟಿಸಿ ವಿರಕ್ತಮಠದ ಸಂಗನಬಸವ ಶ್ರೀಗಳು ಮಾತನಾಡಿ ಭಾರತ ಸೇವಾ ಸಂಸ್ಥೆಯು ಕಳೆದ ಹಲವಾರು ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಕೊಂಡು ತಾಲೂಕಿನ ಜನರ ಮೆಚ್ಚುಗೆಗೆ ಪಾತ್ರವಾಗಿದೆ.ಕೆರೆ ಹುಳು ಎತ್ತುವುದು,ಸಾಮೂಹಿಕ ವಿವಾಹ,ಸ್ಮಶಾನಗಳ ಸ್ವಚ್ಛತೆ,ಬೇಸಿಗೆ ಶಿಬಿರಗಳಂತಹ ಹತ್ತಾರು ಜನಪರ ಕೆಲಸಗಳನ್ನು ಸಂಸ್ಥೆ ಮಾಡುತ್ತಿರುವುದು ನಮ್ಮೆಲ್ಲರ ಮೆಚ್ಚುಗೆಗೆ ಸಂಸ್ಥೆ ಪಾತ್ರವಾಗಿದೆ ಎಂದರು. ಮಾಂಡೆಂಟ್ ನಾಗರಾಜ ಮೆಳ್ಳಾಗಟ್ಟಿ ಮಾತನಾಡಿ ಭಾರತ ಸೇವಾ ಸಂಸ್ಥೆಯು ಬಡ ವಿದ್ಯಾರ್ಥಿಗಳನ್ನು ಆಯ್ಕೆಮಾಡಿ ಉಚಿತ ಬೇಸಿಗೆ ಶಿಬಿರವನ್ನು ನೀಡಿ ಬೇಸಿಗೆ ರಜಾ ದಿನಗಳಲ್ಲಿ ಮಕ್ಕಳು ಟಿವಿ ಮೊಬೈಲ್ ಬಳಕೆಯನ್ನು ಬಿಟ್ಟು ದೈಹಿಕ ಮತ್ತು ಮಾನಸಿಕ ಸದೃಢತೆಯನ್ನು ಬೆಳೆಸಿಕೊಳ್ಳಲು ಉಪಯುಕ್ತಕಾರಿ ಕೆಲಸವನ್ನು ಮಾಡುತ್ತಾ ಬಂದಿರುವ ಸಂಸ್ಥೆಯ ಕಾರ್ಯ ಶ್ಲಾಘನೀಯಯವಾಗಿದೆ ಎಂದರು. ಈ ಸಂದರ್ಭದಲ್ಲಿ ನಜಿರಹ್ಮದ ಶೇಕಸನದಿ, ಭರತ ಕಳ್ಳಿಮನಿ, ಬಸವರಾಜ ಹೊಸಪೇಟೆ, ರವಿ ಮಡಿವಾಳರ,ವಿಜಯ ಬುಳ್ಳಕ್ಕನವರ, ಶಶಿಕಾಂತ ರಾಥೋಡ, ಶಂಕರ ಧಾರವಾಡ, ಸಾಧಿಕ ಸವಣೂರ,ದರ್ಶನ ಕರೂರ, ಮಾಲತೇಶ ಮಾದರ ಹಾಗೂ ಪಾಲಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 