ಸುಣಧೋಳಿ ಜಡಿಸಿದ್ದೇಶ್ವರ ಜಾತ್ರೆ: ಹಗ್ಗವಿಲ್ಲದ ರಥೋತ್ಸವ
ಮೂಡಲಗಿ 24: ಸಮೀಪದ ಸುಣಧೋಳಿ ಗ್ರಾಮದ ಪವಾಡ ಪುರುಷ ಜಡಿಸಿದ್ದೇಶ್ವರ ಜಾತ್ರೆಯು ಪೀಠಾಧಿಪತಿಗಳಾದ ಶಿವಾನಂದ ಸ್ವಾಮಿಜಿಯವರ ಸಾನಿಧ್ಯದಲ್ಲಿ ಜನಸಾಗರ ಮಧ್ಯ ಮಂಗಳವಾರ ಸಂಭ್ರಮ ಸಡಗರದಿಂದ ಜರುಗಿತು.
ಜಾತ್ರೆಯ ಅಂಗವಾಗಿ ಬೆಳಿಗ್ಗೆ ಜಡಿಸಿದ್ದೇಶ್ವರ ಸನ್ನಿಧಿಗೆ ವಿಶೇಷ ಪೂಜೆ, ಅಭಿಷೇಕಗಳು ಜರುಗಿದವು.
ಸಂಜೆ ಜಡಿಸಿದ್ದೇಶ್ವರ ಹಗ್ಗವಿಲ್ಲದ ರಥೋತ್ಸವವೂ ಜನಸ್ತೋಮದ ನಡುವೆ ಪ್ರತಿವರ್ಷದಂತೆ ದೇವಸ್ಥಾನದಿಂದ ಜಡಿಸಿದ್ದೇಶ್ವರರ ಮೂತರ್ಿಯನ್ನು ತಂದು ರಥದಲ್ಲಿ ಪ್ರತಿಷ್ಠಾಪಿಸಿದರು. ಸುಣಧೋಳಿ ಸೇರಿದಂತೆ ಸುತ್ತಮುತ್ತಲಿನ ಹಲವಾರು ಗ್ರಾಮಗಳಿಂದ ಆಗಮಿಸಿದ್ದ ವಿವಿಧ ಗ್ರಾಮಗಳ ದೇವರುಗಳ ಪಲ್ಲಕ್ಕಿಗಳು ಸೇರುವುದರೊಂದಿಗೆ ವಾಲಗ, ಶಹನಾಯಿ, ತಮಟೆ, ಡೊಳ್ಳು ವಿವಿಧ ಭಾರತೀಯ ಸಂಸ್ಕೃತಿಯ ಸಂಗೀತದ ನಾದಗಳ ಮಧ್ಯ ಸಾವಿರಾರು ಭಕ್ತರ ಮುಗಿಲು ಮುಟ್ಟುವ 'ಹರಹರ ಮಹಾದೇವ' ಎಂಬ ಘೋಷಣೆ ಕೇಳುತ್ತಿದಂತೆ ಪವಾಡ ಪುರುಷ ಜಡಿಸಿದ್ದೇಶ್ವರ ತೇರು ಹಗ್ಗವಿಲ್ಲದೇ ಚಲಿಸಿ ಮರಳಿ ತನ್ನ ಸ್ಥಾನಕ್ಕೆ ಬಂದು ನಿಂತಿತು.
ರಥದ ಮೇಲೆ ಭಕ್ತರು ಇಷ್ಟಾನುಸಾರ ತೆಂಗಿನಕಾಯಿ, ಬಾಳೆಹಣ್ಣು, ಖಾರೀಕು, ಬತ್ತಾಸು, ಹಾಗೂ ಹೂವನ್ನು ಸಮಪರ್ಿಸಿ ಕೃತಾರ್ತರಾದರು. ರಾಜ್ಯದ ಮೂಲೆ ಮೂಲೆಯಿಂದ ಆಗಮಿಸಿದ ಹಾಗೂ ಹೊರ ರಾಜ್ಯದಿಂದ ಆಗಮಿಸಿದ ಭಕ್ತರು ಇದಕ್ಕೆ ಸಾಕ್ಷಿಯಾದರು ನಂತರ ಮಹಾಪ್ರಸಾದ ನಡೆಯಿತು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 