ಸಂಡೆ ಸಂಪೂರ್ಣ ಲಾಕ್ ಡೌನ್ : ಕೆಎಸ್ ಆರ್ ಟಿಸಿ, ಬಿಎಂಟಿಸಿ ಸಂಚಾರವಿಲ್ಲ
ಬೆಂಗಳೂರು, ಜು 4: ರಾಜ್ಯದಲ್ಲಿ ಹೆಚ್ಚುತ್ತಿರುವ ಕರೋನಸೋಂಕು ಪ್ರಕರಣ ತಡೆಯಲು ಒಂದು ತಿಂಗಳ ಕಾಲ ಭಾನುವಾರ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಲು ತೀರ್ಮಾನಿಸಿರುವುದರಿಂದ ನಾಳೆ ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ ಸಂಚಾರವಿರುವುದಿಲ್ಲ.
ಲಾಕ್ಡೌನ್ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ಸುಗಳ ಕಾರ್ಯಾಚರಣೆಯು ಭಾನುವಾರ ಬೆಳಿಗ್ಗೆಯಿಂದ ಸೋಮವಾರ ಬೆಳಿಗ್ಗೆಯವರೆಗೂ ಇರುವುದಿಲ್ಲ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಜುಲೈ 5ರಿಂದ ( ನಾಳೆಯಿಂದ) ಜಾರಿಯಾಗುವಂತೆ ಆಗಸ್ಟ್ 2ರವರೆಗೆ ಪ್ರತಿ ಭಾನುವಾರ ಸಂಪೂರ್ಣ ಲಾಕ್ಡೌನ್ ಜಾರಿಯಲ್ಲಿ ಇರಲಿದೆ. ಅಗತ್ಯ ಸೇವಾ ಚಟುವಟಿಕೆಗಳು ಹಾಗೂ ಈಗಾಗಲೇ ನಿಗದಿಯಾಗಿರುವ ವಿವಾಹಗಳಿಗೆ ಇದು ಅನ್ವಯವಾಗುದಿಲ್ಲ.
ಸರಕಾರಿ ಕಚೇರಿಗಳು ಜು.10ರಿಂದ ಅನ್ವಯವಾಗುವಂತೆ ಎಲ್ಲ ಸರಕಾರಿ ಕಚೇರಿಗಳು, ಮಂಡಳಿಗಳು ಹಾಗೂ ನಿಗಮಗಳು(ಅಗತ್ಯ ಸೇವೆಗಳನ್ನು ನಿರ್ವಹಿಸುತ್ತಿರುವ ಕಚೇರಿಗಳು ಹೊರತುಪಡಿಸಿ) ಆಗಸ್ಟ್ 2ರವರೆಗೆ ಎಲ್ಲ ಶನಿವಾರವೂ ಮುಚ್ಚಲಿದೆ.
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ 