ರೂ.6,279.87 ಕೋಟಿ ಮೊತ್ತದ ಪೂರಕ ಅಂದಾಜು ಬೇಡಿಕೆ ಪ್ರಸ್ತಾವ ಮಂಡನೆ
Supplementary Estimated Demand Proposal of Rs. 6,279.87 crores submitted
ಬೆಳಗಾವಿ, ಸುವರ್ಣ ವಿಧಾನಸೌಧ ಡಿ.16: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರದಂದು, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರವಾಗಿ, ರೂ.6,279.87 ಕೋಟಿ ಮೊತ್ತದ 2025-26ನೇ ಸಾಲಿನ ಪೂರಕ ಅಂದಾಜುಗಳ ಎರಡನೇ ಕಂತಿನ ಬೇಡಿಕೆ ಪ್ರಸ್ತಾವನೆಯನ್ನು ಮಂಡಿಸಿದರು.
ಸಂವಿಧಾನದ 205(1) (ಎ)ರ ಅನುಚ್ಛೇದ ಪ್ರಕಾರ ಸರ್ಕಾರ ಎರಡನೇ ಕಂತಿನ ಪೂರಕ ಅಂದಾಜು ಪಟ್ಟಿಯನ್ನು ರಾಜ್ಯ ವಿಧಾನ ಮಂಡಲದ ಮುಂದೆ ಮಂಡಿಸಿದೆ.
ಎರಡನೇ ಕಂತು ಪೂರಕ ಅಂದಾಜಿನಲ್ಲಿ ಒದಗಿಸಿರುವ ಒಟ್ಟು ಮೊತ್ತ ರೂ.6279.87 ಕೋಟಿಗಳಲ್ಲಿ ರೂ.23.46 ಕೋಟಿಗಳು ಪ್ರಭೃತ ವೆಚ್ಚ ಮತ್ತು ರೂ.6256.41 ಕೋಟಿಗಳು ಪುರಸ್ಕøತ ವೆಚ್ಚಕ್ಕೆ ಸೇರಿರುತ್ತವೆ. ಇದರಲ್ಲಿ ಮೀಸಲು ನಿಧಿಯಿಂದ ಭರಿಸಲಾಗುವ ರೂ.618.11 ಕೋಟಿಗಳು ಸಹ ಪುರಸ್ಕøತವಾಗಬೇಕಾಗಿದ್ದು, ಸಂಚಿತ ನಿಧಿಯಿಂದ ಹೊರ ಹೋಗುವ ನಿವ್ವಳ ಮೊತ್ತ ರೂ.5,661.76 ಕೋಟಿಯಾಗಿದೆ. ಇದರಲ್ಲಿ ರೂ.2,240.32 ಕೋಟಿಗಳು ಕೇಂದ್ರ ಸಹಾಯಕ್ಕೆ ಸಂಬಂಧಿಸಿವೆ. ಆದ್ದರಿಂದ ಹೊರ ಹೋಗುವ ನಿವ್ವಳ ನಗದು ಮೊತ್ತ ರೂ.3,421.44 ಕೋಟಿಗಳಾಗಿರುತ್ತವೆ ಎಂದು ಪೂರಕ ಅಂದಾಜು ಪಟ್ಟಿಯಲ್ಲಿ ತಿಳಿಸಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 