ವೃಕ್ಷಥಾನ್ ಹೆರಿಟೇಜ್ ರನ್-2024ಕ್ಕೆ ನೀರೀಕ್ಷೆಗೂ ಮೀರಿ ಬೆಂಬಲ
Support beyond expectation for Vriksathon Heritage Run-2024
ವಿಜಯಪುರ, ಡಿ. 03: ನಗರದಲ್ಲಿ ಡಿಸೆಂಬರ್ 22 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2024ಕ್ಕೆ ನೀರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗುತ್ತಿದ್ದು, ನಗರದ ಮೂರು ಜನ ಗಣ್ಯರು ಪ್ರಾಯೋಜಕತ್ವಕ್ಕಾಗಿ ಆರ್ಥಿಕ ನೆರವು ನೀಡಿದ್ದಾರೆ.
ಕಾಂಗ್ರೆಸ್ ಮುಖಂಡ ಹಮೀದ್ ಮುಶ್ರಿಫ್ ಅವರು ರೂ. 1.50 ಲಕ್ಷ (1 ಲಕ್ಷ 50 ಸಾವಿರ ರೂಪಾಯಿ) ಹಣವನ್ನು ಪ್ರಾಯೋಜಕತ್ವಕ್ಕಾಗಿ ನೆರವು ನೀಡಿದ್ದಾರೆ.
ಅದೇ ರೀತಿ ನಗರದ ಖ್ಯಾತ ಉದ್ಯಮಿ ಜೆ. ಜಿ. ಪಾರೇಖ ಅವರು ರೂ. 1.01 (1 ಲಕ್ಷ 1 ಸಾವಿರ ರೂಪಾಯಿ ಹಣವನ್ನು) ನೀಡಿದ್ದಾರೆ. ಈ ಹಣವನ್ನು ವೃಕ್ಷಥಾನ್ ಹೆರಿಟೇಜ್ ರನ್ 21 ಕಿ. ಮೀ. ಓಟದಲ್ಲಿ ಪಾಲ್ಗೋಳ್ಳುತ್ತಿರುವ ಬಡ ಯುವಕರ ನೋಂದಣಿಗೆ ಪ್ರಾಯೋಜಕತ್ವಕ್ಕಾಗಿ ನೀಡಿದ್ದಾರೆ.
ನಗರದ ಗಣ್ಯ ವ್ಯಾಪಾರಸ್ಥ ಶರಣು ಗುಡ್ಡೊಡಗಿ ಅವರು ರೂ. 75 ಸಾವಿರ ಹಣವನ್ನು ಪ್ರಾಯೋಜಕತ್ವಕ್ಕಾಗಿ ನೀಡಿದ್ದಾರೆ.
ಹಮೀದ್ ಮುಶ್ರಿಫ್ ಮತ್ತು ಶರಣು ಗುಡ್ಡೊಡಗಿ ಅವರು ಕಳೆದ ಬಾರಿಯ ವೃಕ್ಷಥಾನ್ ಹೆರಿಟೇಜ್ ರನ್ ಓಟಕ್ಕೂ ಪ್ರಾಯೋಜಕತ್ವಕ್ಕಾಗಿ ಆರ್ಥಿಕ ನೆರವು ನೀಡಿದ್ದು ಗಮನಾರ್ಹವಾಗಿದೆ. ಮೂರೂ ಜನ ಪ್ರಾಯೋಜಕರಿಗೆ ವೃಕ್ಷಥಾನ್ ಹೆರಿಟೇಜ್ ರನ್ ಕೋರ್ ಕಮಿಟಿ ಪದಾಧಿಕಾರಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 