ಜನತಾ ಕರ್ಫ್ಯೂ ಬೆಂಬಲಿಸಿ: ಸಚಿವ ರಮೇಶ್ ಜಾರಕಿಹೊಳಿ
ಬೆಂಗಳೂರು, ಮಾ 21, ದೇಶಾದ್ಯಂತ ಕೊರೋನಾ ವೈರಸ್ ಭೀತಿ ಎದುರಾಗಿರುವ ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರದಂದು ಜನತಾ ಕರ್ಫ್ಯೂ ಆಚರಿಸುವಂತೆ ಕರೆ ನೀಡಿದ್ದು, ಭಾರತದ ಜಾಗೃತ ಪ್ರಜೆಯಾಗಿ, ಸಂಕಲ್ಪ ಹಾಗೂ ಸಂಯಯದಿಂದ ಈ ’ಜನತಾ ಕರ್ಫ್ಯೂ’ ಪಾಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಭಾನುವಾರ ಸ್ವಯಂ ಪ್ರೇರಣೆಯಿಂದ ನಡೆಯಲಿರುವ ’ಜನತಾ ಕರ್ಫ್ಯೂ’ವನ್ನು ಬೆಂಬಲಿಸೋಣ. ಈ ಸಂದಿಗ್ಧ ಪರಿಸ್ಥಿತಿಯನ್ನು ಎಲ್ಲರೂ ಒಟ್ಟಾಗಿ, ಧೈರ್ಯದಿಂದ ಎದುರಿಸೋಣ ಮತ್ತು ಭಾರತವನ್ನು ಕೊರೋನಾ ಮುಕ್ತ ರಾಷ್ಟ್ರವಾಗಿ ಮಾಡೋಣ ಎಂದು ತಿಳಿಸಿದ್ದಾರೆ. ನಾವು ಆರೋಗ್ಯವಾಗಿದ್ದರೆ ರಾಷ್ಟ್ರದ ಆರೋಗ್ಯ ಸರಿಯಿರಲಿದೆ. ಕೊರೋನಾ ವೈರಸ್ ಹರಡುವಿಕೆಯಿಂದ ಜನರನ್ನು ತಡೆಗಟ್ಟುವುದು ನಮ್ಮ ಕರ್ತವ್ಯ. ಈ ಹಂತದಲ್ಲಿ 'ಸಾಮಾಜಿಕ ಅಂತರ ' ತುಂಬಾ ಪ್ರಾಮುಖ್ಯ. ಆದ್ದರಿಂದ ಜನತಾ ಕರ್ಫ್ಯೂ ಬೆಂಬಲಿಸಬೇಕು ಎಂದು ಸಚಿವ ರಮೇಶ್ ಜಾರಕಿಹೊಳಿ ಮನವಿ ಮಾಡಿದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 