ಜನತಾ ಕರ್ಫ್ಯೂ ಬೆಂಬಲಿಸಿ: ಸಚಿವ ರಮೇಶ್ ಜಾರಕಿಹೊಳಿ
ಬೆಂಗಳೂರು, ಮಾ 21, ದೇಶಾದ್ಯಂತ ಕೊರೋನಾ ವೈರಸ್ ಭೀತಿ ಎದುರಾಗಿರುವ ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರದಂದು ಜನತಾ ಕರ್ಫ್ಯೂ ಆಚರಿಸುವಂತೆ ಕರೆ ನೀಡಿದ್ದು, ಭಾರತದ ಜಾಗೃತ ಪ್ರಜೆಯಾಗಿ, ಸಂಕಲ್ಪ ಹಾಗೂ ಸಂಯಯದಿಂದ ಈ ’ಜನತಾ ಕರ್ಫ್ಯೂ’ ಪಾಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಭಾನುವಾರ ಸ್ವಯಂ ಪ್ರೇರಣೆಯಿಂದ ನಡೆಯಲಿರುವ ’ಜನತಾ ಕರ್ಫ್ಯೂ’ವನ್ನು ಬೆಂಬಲಿಸೋಣ. ಈ ಸಂದಿಗ್ಧ ಪರಿಸ್ಥಿತಿಯನ್ನು ಎಲ್ಲರೂ ಒಟ್ಟಾಗಿ, ಧೈರ್ಯದಿಂದ ಎದುರಿಸೋಣ ಮತ್ತು ಭಾರತವನ್ನು ಕೊರೋನಾ ಮುಕ್ತ ರಾಷ್ಟ್ರವಾಗಿ ಮಾಡೋಣ ಎಂದು ತಿಳಿಸಿದ್ದಾರೆ. ನಾವು ಆರೋಗ್ಯವಾಗಿದ್ದರೆ ರಾಷ್ಟ್ರದ ಆರೋಗ್ಯ ಸರಿಯಿರಲಿದೆ. ಕೊರೋನಾ ವೈರಸ್ ಹರಡುವಿಕೆಯಿಂದ ಜನರನ್ನು ತಡೆಗಟ್ಟುವುದು ನಮ್ಮ ಕರ್ತವ್ಯ. ಈ ಹಂತದಲ್ಲಿ 'ಸಾಮಾಜಿಕ ಅಂತರ ' ತುಂಬಾ ಪ್ರಾಮುಖ್ಯ. ಆದ್ದರಿಂದ ಜನತಾ ಕರ್ಫ್ಯೂ ಬೆಂಬಲಿಸಬೇಕು ಎಂದು ಸಚಿವ ರಮೇಶ್ ಜಾರಕಿಹೊಳಿ ಮನವಿ ಮಾಡಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 