ನಿರ್ಭಯಾ ಅಪರಾಧಿಯ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್
ನವದೆಹಲಿ, ಮಾ 19, ನಿರ್ಭಯಾ ಅತ್ಯಾಚಾರ ಮತ್ತುಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಓರ್ವನಾದ ಪವನ್ ಗುಪ್ತಾ ಎಂಬಾತನ ಮರುಪರಿಶೀಲನಾ ರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ವಜಾಗೊಳಿಸಿದೆ. ಈತ ತಾನು ಅಪರಾಧ ನಡೆದ ಸಂದರ್ಭದಲ್ಲಿ ಅಪ್ರಾಪ್ತನಾಗಿದ್ದೆ. ಆದ್ದರಿಂದ ತಮಗೆ ವಿಧಿಸಿರುವ ಗಲ್ಲುಶಿಕ್ಷೆಯಿಂದ ವಿನಾಯ್ತಿ ನೀಡಬೇಕು ಎಂದು ಮರುಪರಿಶೀಲನಾ ಅರ್ಜಿಯಲ್ಲಿ ಕೋರಿದ್ದನು. ಮಾರ್ಚ್ 5ರಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಧರ್ಮೇಂದ್ರ ರಾಣಾ ಅವರು ಅಪರಾಧಿಗಳನ್ನು ಮಾ. 20ರಂದು ಬೆಳಗ್ಗೆ 5.30ಕ್ಕೆ ಗಲ್ಲಿಗೇರಿಸುವಂತೆ ನಾಲ್ಕನೇ ಬಾರಿಗೆ ಡೆತ್ ವಾರಂಟ್ ಹೊರಡಿಸಿದ್ದರು. 2012ರ ಡಿ. 16ರಂದು ಚಲಿಸುತ್ತಿದ್ದ ಬಸ್ ನಲ್ಲಿ ವೈದ್ಯಕೀಯ ವಿದ್ಯಾರ್ಥಿಯನ್ನು ಸಾಮೂಹಿಕ ಅತ್ಯಾಚಾರ ಮಾಡಿ ಸಾಮೂಹಿಕ ಹತ್ಯೆ ಮಾಡಿದ ಆರೋಪದ ಮೇಲೆ ಮುಖೇಶ್ ಸಿಂಗ್, ಪವನ್ ಕುಮಾರ್ ಗುಪ್ತ, ವಿನಯ್ ಕುಮಾರ್ ಶರ್ಮಾ ಮತ್ತು ಅಕ್ಷಯ್ ಸಿಂಗ್ ಗೆ ಗಲ್ಲುಶಿಕ್ಷೆ ವಿಧಿಸಲಾಗಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 