ಅಯೋಧ್ಯೆ ವಿವಾದ ಶೀಘ್ರ ಮುಗಿಸಲು ಸುಪ್ರೀಂ ನಿದರ್ೆಶನ: ಬಿಜೆಪಿ ಸ್ವಾಗತ
ನವದೆಹಲಿ, ಸೆ 18 ಅಯೋಧ್ಯ ವಿವಾದದ ವಿಚಾರಣೆಯನ್ನು ಶೀಘ್ರವಾಗಿ ನಡೆಸಲು ಎಲ್ಲಾ ಪಕ್ಷಗಳು ತಮ್ಮ ವಾದಗಳನ್ನು ಅಕ್ಟೋಬರ್ 18ರೊಳಗೆ ಮುಗಿಸುವಂತೆ ಸುಪ್ರೀಂಕೋರ್ಟ್ ನೀಡಿದ ನಿರ್ದೇಶನವನ್ನು ಬಿಜೆಪಿ ಬುಧವಾರ ಸ್ವಾಗತಿಸಿದೆ.
ಅಯೋಧ್ಯೆಯ ರಾಮ ಮಂದಿರದ ಅಂತಿಮ ತೀರ್ಪಿಗಾಗಿ ಇಡೀ ದೇಶ ಕಾಯುತ್ತಿದೆ. ಈಗಾಗಲೇ ಮಂದಿರವನ್ನು ಟೆಂಟ್ನಲ್ಲಿ ನಿರ್ಮಿಸಲಾಗಿದೆ. ಈಗ ಭವ್ಯ ಮಂದಿರಕ್ಕಾಗಿ ಕಾಯುತ್ತಿದ್ದೇವೆ ಎಂದು ಬಿಜೆಪಿ ವಕ್ತಾರ ಶಹನವಾಜ್ ಹುಸೇನ್ ಸುದ್ದಿಗಾರರಿಗೆ ತಿಳಿಸಿದರು.
ಮಾತುಕತೆಗಳ ಮೂಲಕ ಸಮಸ್ಯೆಯನ್ನು ಪರಿಹರಿಸುವ ಪ್ರಯತ್ನ ನಡೆಯುತ್ತಿದೆ, ಆದರೆ ಅದರಿಂದ ಯಾವುದೇ ಫಲಿತಾಂಶ ಬಂದಿಲ್ಲ ಎಂದು ಅವರು ಹೇಳಿದರು.
ನ್ಯಾಯಾಲಯ ಶನಿವಾರ ಕೂಡ ವಿಚಾರಣೆ ನಡೆಸಲು ಸಿದ್ಧವಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಹೇಳಿದ್ದಾರೆ ಎಂದವರು ತಿಳಿಸಿದರು.
ಸಮಸ್ಯೆಯನ್ನು ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ ಎಂಬುದು ನಿಜ ಎಂದು ಅವರು ಹೇಳಿದರು.
ಬಿಜೆಪಿಯ ಮತ್ತೊಬ್ಬ ಮುಖಂಡ ಗಿರಿರಾಜ್ ಸಿಂಗ್ ಕೂಡ ನ್ಯಾಯಾಲಯದ ಕ್ರಮವನ್ನು ಸ್ವಾಗತಿಸಿದ್ದು, ಕೋಟ್ಯಂತರ ಜನರು ರಾಮ ಮಂದಿರಕ್ಕಾಗಿ ಕಾಯುತ್ತಿದ್ದಾರೆ ಎಂದು ಹೇಳಿದರು
ಅಯೋಧ್ಯೆ-ಬಾಬರಿ ಮಸೀದಿ ಭೂ ವಿವಾದ ಪ್ರಕರಣದಲ್ಲಿ ಎಲ್ಲಾ ಪಕ್ಷಗಳು ತಮ್ಮ ವಾದಗಳನ್ನು ಅಕ್ಟೋಬರ್ 18ರೊಳಗೆ ಮುಗಿಸಲು ಗಡುವನ್ನು ಸುಪ್ರೀಂಕೋರ್ಟ್ ನೀಡಿದೆ. ಈ ಗಡುವಿನೊಳಗೆ ವಾದ ಮಂಡಿಸಲು ಮತ್ತು ದಾಖಲೆ ಸಲ್ಲಿಸಲು ಅಗತ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುವಂತೆ ಆಯಾ ಪಕ್ಷಗಳಿಗೆ ಪೀಠ ಸೂಚಿಸಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 