ಕಮಲಹಾಸನ್ ಗೆ ನಾಳೆ ಚೆನ್ನೈ ನಲ್ಲಿ ಶಸ್ತ್ರಚಿಕಿತ್ಸೆ
ಚೆನ್ನೈ, 21 ಬಹುಭಾಷಾ ನಟ, ತಮಿಳುನಾಡಿನ ಮಕ್ಕಲ್ ನೀದಿ ಮಯ್ಯಂ ಪಕ್ಷ - ಎಂ ಎನ್ ಎಂ ಪಿ ಅಧ್ಯಕ್ಷ ಕಮಲ ಹಾಸನ್ ಅವರು ನಾಳೆ ಆಸ್ಪತ್ರೆಗೆ ದಾಖಲಾಗಲಿದ್ದಾರೆ.
ಅವರ ಕಾಲಿಗೆ ಅಳವಡಿಸಲಾಗಿರುವ ಇಂಪ್ಲಾಂಟ್ ತೆಗೆಯಲು ವೈದ್ಯರು ಶುಕ್ರವಾರ ಅವರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಲಿದ್ದಾರೆ. 2016 ರ ರಸ್ತೆ ಅಪಘಾತದಲ್ಲಿ ಕಮಲ ಹಾಸನ್ ಅವರು ಕಾಲು ಮುರಿಕೊಂಡಿದ್ದಾಗ ವೈದ್ಯರು ಇಂಪ್ಲಾಂಟ್ ಅಳವಡಿಸಿದ್ದರು. ಈಗ ಅದನ್ನು ತೆಗೆದುಹಾಕಬೇಕಾಗಿದೆ. ವೈದ್ಯರ ಸಲಹೆಯ ಮೇರೆಗೆ ಕಮಲ ಹಾಸನ್ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂ ಎನ್ ಎಂ ಪಕ್ಷದ ಉಪಾಧ್ಯಕ್ಷ ಡಾ.ಆರ್ ಮಹೇಂದ್ರನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ಕಮಲ್ ಹಾಸನ್ ನಾಳೆ (ನವೆಂಬರ್ 22) ಆಸ್ಪತ್ರೆಗೆ ದಾಖಲಾಗಲಿದ್ದು, ಚೇತರಿಸಿಕೊಳ್ಳಲು ಸ್ವಲ್ಪ ದಿನಗಳು ಅಗತ್ಯವಾಗಲಿದೆ ಎಂದು ಮಹೇಂದ್ರನ್ ಹೇಳಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 