ಕಮಲಹಾಸನ್ ಗೆ ನಾಳೆ ಚೆನ್ನೈ ನಲ್ಲಿ ಶಸ್ತ್ರಚಿಕಿತ್ಸೆ
ಚೆನ್ನೈ, 21 ಬಹುಭಾಷಾ ನಟ, ತಮಿಳುನಾಡಿನ ಮಕ್ಕಲ್ ನೀದಿ ಮಯ್ಯಂ ಪಕ್ಷ - ಎಂ ಎನ್ ಎಂ ಪಿ ಅಧ್ಯಕ್ಷ ಕಮಲ ಹಾಸನ್ ಅವರು ನಾಳೆ ಆಸ್ಪತ್ರೆಗೆ ದಾಖಲಾಗಲಿದ್ದಾರೆ.
ಅವರ ಕಾಲಿಗೆ ಅಳವಡಿಸಲಾಗಿರುವ ಇಂಪ್ಲಾಂಟ್ ತೆಗೆಯಲು ವೈದ್ಯರು ಶುಕ್ರವಾರ ಅವರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಲಿದ್ದಾರೆ. 2016 ರ ರಸ್ತೆ ಅಪಘಾತದಲ್ಲಿ ಕಮಲ ಹಾಸನ್ ಅವರು ಕಾಲು ಮುರಿಕೊಂಡಿದ್ದಾಗ ವೈದ್ಯರು ಇಂಪ್ಲಾಂಟ್ ಅಳವಡಿಸಿದ್ದರು. ಈಗ ಅದನ್ನು ತೆಗೆದುಹಾಕಬೇಕಾಗಿದೆ. ವೈದ್ಯರ ಸಲಹೆಯ ಮೇರೆಗೆ ಕಮಲ ಹಾಸನ್ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂ ಎನ್ ಎಂ ಪಕ್ಷದ ಉಪಾಧ್ಯಕ್ಷ ಡಾ.ಆರ್ ಮಹೇಂದ್ರನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ಕಮಲ್ ಹಾಸನ್ ನಾಳೆ (ನವೆಂಬರ್ 22) ಆಸ್ಪತ್ರೆಗೆ ದಾಖಲಾಗಲಿದ್ದು, ಚೇತರಿಸಿಕೊಳ್ಳಲು ಸ್ವಲ್ಪ ದಿನಗಳು ಅಗತ್ಯವಾಗಲಿದೆ ಎಂದು ಮಹೇಂದ್ರನ್ ಹೇಳಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 