ಕಮಲಹಾಸನ್ ಗೆ ನಾಳೆ ಚೆನ್ನೈ ನಲ್ಲಿ ಶಸ್ತ್ರಚಿಕಿತ್ಸೆ
ಚೆನ್ನೈ, 21 ಬಹುಭಾಷಾ ನಟ, ತಮಿಳುನಾಡಿನ ಮಕ್ಕಲ್ ನೀದಿ ಮಯ್ಯಂ ಪಕ್ಷ - ಎಂ ಎನ್ ಎಂ ಪಿ ಅಧ್ಯಕ್ಷ ಕಮಲ ಹಾಸನ್ ಅವರು ನಾಳೆ ಆಸ್ಪತ್ರೆಗೆ ದಾಖಲಾಗಲಿದ್ದಾರೆ.
ಅವರ ಕಾಲಿಗೆ ಅಳವಡಿಸಲಾಗಿರುವ ಇಂಪ್ಲಾಂಟ್ ತೆಗೆಯಲು ವೈದ್ಯರು ಶುಕ್ರವಾರ ಅವರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಲಿದ್ದಾರೆ. 2016 ರ ರಸ್ತೆ ಅಪಘಾತದಲ್ಲಿ ಕಮಲ ಹಾಸನ್ ಅವರು ಕಾಲು ಮುರಿಕೊಂಡಿದ್ದಾಗ ವೈದ್ಯರು ಇಂಪ್ಲಾಂಟ್ ಅಳವಡಿಸಿದ್ದರು. ಈಗ ಅದನ್ನು ತೆಗೆದುಹಾಕಬೇಕಾಗಿದೆ. ವೈದ್ಯರ ಸಲಹೆಯ ಮೇರೆಗೆ ಕಮಲ ಹಾಸನ್ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂ ಎನ್ ಎಂ ಪಕ್ಷದ ಉಪಾಧ್ಯಕ್ಷ ಡಾ.ಆರ್ ಮಹೇಂದ್ರನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ಕಮಲ್ ಹಾಸನ್ ನಾಳೆ (ನವೆಂಬರ್ 22) ಆಸ್ಪತ್ರೆಗೆ ದಾಖಲಾಗಲಿದ್ದು, ಚೇತರಿಸಿಕೊಳ್ಳಲು ಸ್ವಲ್ಪ ದಿನಗಳು ಅಗತ್ಯವಾಗಲಿದೆ ಎಂದು ಮಹೇಂದ್ರನ್ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 