ಅಮ್ಜದ್ ಪಟೇಲ್ ಅವರ ಸಮೀಕ್ಷೆ ಮಾಡಿದ ಶಿಕ್ಷಕ ಹ್ಯಾಟಿ
Survey: Koppal
ಕೊಪ್ಪಳ 30 : ಕರ್ನಾಟಕ ಸರ್ಕಾರ ಕೈಗೊಂಡಿರುವ ಜನರ ಆರ್ಥಿಕ ಮತ್ತು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ಕಾರ್ಯ ಭರದಿಂದ ಸಾಗಿದ್ದು ಮಂಗಳವಾರ ಬೆಳಿಗ್ಗೆ ಕೊಪ್ಪಳ ನಗರದ ಮೂರನೇ ವಾರ್ಡಿನ ವ್ಯಾಪ್ತಿಯಲ್ಲಿ ಬರುವ ಹಮಾಲರ ಕಾಲೋನಿಯಲ್ಲಿರುವ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ರವರ ನಿವಾಸಕ್ಕೆ ಕುಟುಂಬದ ಸಮೀಕ್ಷೆ ಮಾಡಲು ಆಗಮಿಸಿದ ಶಿಕ್ಷಕ ಮಲ್ಲಿಕಾರ್ಜುನ್ ಹ್ಯಾಟಿ ಯವರಿಗೆ ಮನೆಯ ಮುಖ್ಯಸ್ಥರಾಗಿರುವ ಅಮ್ಜದ್ ಪಟೇಲ ರವರು ತಮ್ಮ ಕುಟುಂಬದ ಸಂಪೂರ್ಣ ಮಾಹಿತಿ ನೀಡಿದರು.
ಸಮೀಕ್ಷೆ ನಡೆಸಿದ ಶಿಕ್ಷಕ ಮಲ್ಲಿಕಾರ್ಜುನ್ ಹ್ಯಾಟಿ ಅವರು ಬಹಳ ವಿಸ್ತಾರವಾಗಿ ನಿಗದಿತ ಫಾರಂ ನಮೂನೆಯಲ್ಲಿ ಕೇಳಿರುವ ಎಲ್ಲಾ ಮಾಹಿತಿಗಳನ್ನು ಒಂದೊಂದಾಗಿ ಕೇಳಿ ಭರ್ತಿ ಮಾಡಿಕೊಂಡು ತೆರಳಿದರು, ಮನೆಮನೆಗೆ ಭೇಟಿ ನೀಡಿ ತಮಗೆ ನೀಡಿರುವ ಜವಾಬ್ದಾರಿ ನಿಭಾಯಿಸಲು ಮತ್ತು ಎಲ್ಲಾ ಕಾರ್ಯ ಸಂಪೂರ್ಣವಾಗಿ ನೆರವೇರಿಸಲು ಪ್ರತಿದಿನ ರಾತ್ರಿ ಸುಮಾರು 9 ಗಂಟೆ ವರೆಗೆ ಸಮೀಕ್ಷಾ ಕಾರ್ಯ ನಡೆಸುತ್ತಿದ್ದಾರೆ ಸದರಿ ಯವರ ಜವಾಬ್ದಾರಿಯುತ ಉತ್ತಮ ಕಾರ್ಯಕ್ಕೆ ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ರವರು ಅಭಿನಂದಿಸಿ ನಗರದ ಸಾರ್ವಜನಿಕರು ತಮ್ಮ ತಮ್ಮ ಮನೆಗೆ ಸಮೀಕ್ಷೆಗೆ ಬಂದ ಶಿಕ್ಷಕರಿಗೆ ಎಲ್ಲಾ ಮಾಹಿತಿಗಳನ್ನು ನೀಡಿ ಸರ್ಕಾರದ ಈ ಕಾರ್ಯಕ್ರಮ ಯಶಸ್ವಿಗೊಳಿಸಲು ಸಾರ್ವಜನಿಕರಲ್ಲಿ ಅವರು ಮನವಿ ಮಾಡಿಕೊಂಡರು,
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 