ಸುಶಾಂತ್ ಕೊನೆಯ ಚಿತ್ರ ‘ದಿಲ್ ಬೆಚರಾ’ದ ಪ್ರಚಾರ ಮಾಡಲಿದ್ದಾರೆ ರಾಜಕುಮಾರ್
ನವದೆಹಲಿ, ಜೂನ್ 26 ಬಾಲಿವುಡ್ ನಟ ರಾಜ್ಕುಮಾರ್ ರಾವ್ ಅವರು ಸುಶಾಂತ್ ಸಿಂಗ್ ರಜಪೂತ್ ಅವರ ಕೊನೆಯ ಚಿತ್ರ “ದಿಲ್ ಬೆಚರಾ”ದ ಪ್ರಚಾರ ಮಾಡಲಿದ್ದಾರೆ.ಸುಶಾಂತ್ ಅವರ ಕೊನೆಯ ಚಿತ್ರ 'ದಿಲ್ ಬೆಚರಾ' ಜುಲೈ 24 ರಂದು ಒಟಿಟಿ ವೇದಿಕೆ ಡಿಸ್ನಿ ಪ್ಲಸ್ ಹಾಟ್ಸ್ಟಾರ್ನಲ್ಲಿ ಬಿಡುಗಡೆಯಾಗುತ್ತಿದೆ. ಚಿತ್ರದ ಪೋಸ್ಟರ್ ಅನ್ನು ರಾಜ್ಕುಮಾರ್ ರಾವ್ ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸುಶಾಂತ್ ಅವರ ಚೊಚ್ಚಲ ಚಿತ್ರ ‘ಕ್ಯಾ ಪೂಛೆ’ ಮತ್ತು 'ರಾಬ್ತಾ' ಚಿತ್ರದಲ್ಲಿ ರಾಜ್ಕುಮಾರ್ ನಟಿಸಿದ್ದರು.ಸುಶಾಂತ್ ಸಿಂಗ್ ರಜಪೂತ್ ಅವರ ಅಕಾಲಿಕ ನಿಧನದ ಬಗ್ಗೆ ದುಃಖ ವ್ಯಕ್ತಪಡಿಸಿದ ರಾಜಕುಮಾರ್ ರಾವ್ ಸಾಮಾಜಿಕ ಮಾಧ್ಯಮದಲ್ಲಿ "ನಿಮ್ಮ ನೆನಪು ಆಯಿತು ಸಹೋದರ" ಎಂದು ಬರೆದಿದ್ದಾರೆ.ಚಿತ್ರವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡುವ ನಿರ್ಧಾರದಿಂದ ಸೋಶಿಯಲ್ ಮೀಡಿಯಾದಲ್ಲಿ ಜನರು ಸಾಕಷ್ಟು ಅಸಮಾಧಾನ ವ್ಯಕ್ತಪಡಿಸಿದರು ಅಲ್ಲದೆ ಚಿತ್ರ ಮಂದಿರಗಳಲ್ಲಿ ಬಿಡುಗಡೆಗೆ ಒತ್ತಾಯಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 