ಲಂಚ ಪಡೆದ ಸಾರಿಗೆ ಅಧಿಕಾರಿಗಳ ಅಮಾನತು: ರೂ12,350 ನಗದು ವಶ
ಬೆಂಗಳೂರು, ಏ.3,ಬೆಂಗಳೂರು ನಗರ ಜಿಲ್ಲೆಯ ಅತ್ತಿಬೆಲೆ ಚೆಕ್ ಪೋಸ್ಟ್ ಅಲ್ಲಿ ನಿನ್ನೆ ರಾತ್ರಿ ಹಣ್ಣು ಮತ್ತು ತರಕಾರಿ ಸಾಗಣೆ ಮಾಡುತ್ತಿದ್ದ ವಾಹನ ಚಾಲಕರಿಂದ ಲಂಚ ಪಡೆದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಇಬ್ಬರು ಬ್ರೇಕ್ ಇನ್ಸ್ ಪೆಕ್ಟರ್ ಗಳನ್ನು ಜಿಲ್ಲಾಧಿಕಾರಿಗಳಾದ ಜಿ ಎನ್ ಶಿವಮೂರ್ತಿ ಅಮಾನತು ಮಾಡಿದ್ದಾರೆ. ಬ್ರೇಕ್ ಇನ್ಸ್ ಪೆಕ್ಟರ್ ಗಳಾದ ಟಿ. ಕೆ ಜಯಣ್ಣ ಹಾಗೂ ಕರಿಯಪ್ಪ ಅಮಾನತುಗೊಂಡ ಸಾರಿಗೆ ಅಧಿಕಾರಿಗಳು ಸೇರಿದಂತೆ ಇವರೊಂದಿಗೆ ಶಾಮೀಲಾಗಿದ್ದ ಮಾಜಿ ಹೋಮ್ ಗಾರ್ಡ್ ವಿವೇಕ್ ಅವರನ್ನು ಚಾಲಕರಿಂದ ಲಂಚ ಪಡೆದ ಹಿನ್ನೆಲೆ ಅಪರ ಪೊಲೀಸ್ ಅಧೀಕ್ಷಕರಾದ ಸಜಿತ್ ಅವರಿಂದ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಕರಿಯಪ್ಪ ಅವರಿಂದ ರೂ. 1250, ಜಯಣ್ಣ ಅವರಿಂದ ರೂ 1100 ಹಾಗೂ ವಿವೇಕ್ ಅವರಿಂದ ರೂ 800 ಹಾಗೂ ಚೆಕ್ ಪೋಸ್ಟ್ ಕಚೇರಿಯಲ್ಲಿ ರೂ. 12350 ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 