ಅನೈತಿಕ ಸಂಬಂಧದ ಶಂಕೆ: ಯುವಕನ ಹತ್ಯೆ

ಅನೈತಿಕ ಸಂಬಂಧದ ಶಂಕೆ: ಯುವಕನ ಹತ್ಯೆ  Suspicion of illicit affair: Youth murdered


ಲಕ್ಷ್ಮೇಶ್ವರ, 27: ತಾಲ್ಲೂಕಿನ ಪುಟಗಾಂವ ಬಡ್ನಿ ಗ್ರಾಮದಲ್ಲಿ ಬುಧವಾರ ರಾತ್ರಿ ಸುಮಾರು 10 ಗಂಟೆಗೆ 35 ವರ್ಷದ ಈರಣ್ಣ ಷಣ್ಮುಖಪ್ಪ ಅಗಸಿಬಾಗಿಲ ಎಂಬ ಯುವಕನ ಹತ್ಯೆ ನಡೆದಿರುವ ಘಟನೆ ನಡೆದಿದೆ.  ಅನೈತಿಕ ಸಂಬಂಧದ ಶಂಕೆಯಿಂದ ಯುವಕನನ್ನು ಹತ್ಯೆ ಮಾಡಲಾಗಿದೆ ಎನ್ನಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳು ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ. ಈ ಕುರಿತು ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.