13ರಂದು ಸ್ವಾಮಿಗಳ ಜಯಂತ್ಯೋತ್ಸವ ಹಾಗು ಕೊಟ್ಟೂರೇಶ್ವರ ರಥೋತ್ಸವ
Swami Jayanti and Kottureshwara Chariot Festival on the 13th
13ರಂದು ಸ್ವಾಮಿಗಳ ಜಯಂತ್ಯೋತ್ಸವ ಹಾಗು ಕೊಟ್ಟೂರೇಶ್ವರ ರಥೋತ್ಸವ
ಬಳ್ಳಾರಿ 10 : ಕೊಟ್ಟೂರುಸ್ವಾಮಿ ಸಂಸ್ಥಾನ ಮಠದಲ್ಲಿ ಹಾನಗಲ್ಲಕುಮಾರ ಮಹಾಶಿವಯೋಗಿಗಳ 158ನೆಯ ಹಾಗೂ ಜಗದ್ಗುರುಡಾ. ಸಂಗನಬಸವ ಮಹಾಸ್ವಾಮಿಗಳವರ 87ನೇ ಜಯಂತ್ಯೋತ್ಸವು ಸೆಪ್ಟಂಬರ್ 13 ಮತ್ತು 14 ರಂದು ನಡೆಯಲಿವೆ. ಸೆಪ್ಟಂಬರ್ 13ರ ಶನಿವಾರ ಸಂಜೆ 4 ಗಂಟೆಗೆ ಸೋಮಸಮುದ್ರಗ್ರಾಮದಲ್ಲಿ ಪ್ರಾರಂಭವಾಗುವ ಪಾದಯಾತ್ರೆಯು ಶ್ರೀಧರಗಡ್ಡೆ ಗ್ರಾಮವನ್ನುತಲುಪಿ, ಶ್ರೀಕನಕ ದುರ್ಗಮ್ಮಗುಡಿಯ ಮೂಲಕ ಬ್ರೂಸ್ಪೇಟೆ ಪೊಲೀಸ್ಠಾಣೆಯ ಮೂಲಕ ಶ್ರೀಮಠದಲ್ಲಿ ಸಮಾರೋಪಗೊಳ್ಳಲಿದೆ. ಅಲ್ಲದೇ, ಸಂಜೆ 7 ಗಂಟೆಗೆ ಕೊಟ್ಟೂರೇಶ್ವರರ ರಥೋತ್ಸವವು ನೆರವೇರುವುದು. ಸಂಜೆ 7 ಗಂಟೆಗೆ ಹಾನಗಲ್ಲಕುಮಾರ ಮಹಾಶಿವಯೋಗಿಗಳ ‘ಜೀವನದರ್ಶನ’ ಪ್ರವಚನ ಮಂಗಲೋತ್ಸವ. ಬಾಗಲಕೋಟೆಯ ಗೌ.ಮ.ಉಮಾಪತಿ ಶಾಸ್ತ್ರಿಗಳು ರಚಿಸಿರುವ ‘ಹಂಪೆ ಹೇಮಕೂಟ ಸಿಂಹಾಸನಾಧೀಶ್ವರ ಶ್ರೀ ಜಗದ್ಗುರುಕೊಟ್ಟೂರಸ್ವಾಮಿ ಗುರುಪರಂಪರೆ’ ಗ್ರಂಥ ಲೋಕಾರೆ್ಣ ನಡೆಯಲಿದೆ.ಸೆಪ್ಟಂಬರ್ 14ರ ಭಾನುವಾರ ಬೆಳಗ್ಗೆ 10 ಗಂಟೆಗೆ 1111 ಮುತ್ತೈದೆಯರಿಗೆ ಉಡಿ ತುಂಬುವಿಕೆ ಹಾಗೂ ಪೂಜ್ಯದ್ವಯರ ಭಾವಚಿತ್ರದ ಮಹೋತ್ಸವ ನೆರವೇರಲಿದೆ.ಎರೆಡು ದಿನಗಳ ಕಾರ್ಯಕ್ರಮಗಳಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಗಣ್ಯರು ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಮಾಡಿರುವವರು ಪಾಲ್ಗೊಳ್ಳಲಿದ್ದಾರೆ ಎಂದು ಶ್ರೀಮಠ ತಿಳಿಸಿದೆ.ಎರೆಡು ದಿನಗಳ ಕಾರ್ಯಕ್ರಮಗಳಲ್ಲಿ ಬಳ್ಳಾರಿ, ಶ್ರೀಧರಗಡ್ಡೆ, ಶಿರಿವಾರ, ಸೋಮಸಮುದ್ರ, ಮದಿರೆ, ಕುರುಗೋಡು, ದರೂರು, ಸಿರಿಗೇರಿ ಹಾಗೂ ಸುತ್ತಲಿನ ವಿವಿಧ ಗ್ರಾಮಗಳ ಗುರುಹಿಹಿರಿಯರು, ಭಕ್ತಾಧಿಗಳುಪಾಲ್ಗೊಳ್ಳಲಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 