ಸಂವಿಧಾನದ ಮೂರು ಆಧಾರ ಸ್ತಂಭಗಳು ಸಮತೋಲನ ಕಾಯ್ದುಕೊಂಡಿವೆ-ಪ್ರಧಾನಿ ಮೋದಿ
ನವದೆಹಲಿ, ಫೆ 22 : ಎಲ್ಲ ಸವಾಲುಗಳ ಮಧ್ಯೆ, ರಾಷ್ಟ್ರಕ್ಕೆ ಮಾರ್ಗದರ್ಶನ ತೋರಲು ಸಂವಿಧಾನದ ಮೂರು ಆಧಾರ ಸ್ತಂಭಗಳಾದ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗ ಸಮತೋಲನವನ್ನು ಕಾಯ್ದುಕೊಂಡಿದ್ದು, ದೇಶವನ್ನು ಸರಿಯಾದ ಹಾದಿಯಲ್ಲಿ ಸಾಗಿಸಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶನಿವಾರ ಇಲ್ಲಿ ನಡೆದ ಅಂತಾರಾಷ್ಟ್ರೀಯ ನ್ಯಾಯಾಂಗ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ದೇಶದಲ್ಲಿ ಕಾನೂನು ನಿಯಮ ಭಾರತದ ಸಾರ್ವಜನಿಕ ನೀತಿಯ ಮೂಲಾಧಾರವಾಗಿದೆ ಎಂದು ಹೇಳಿದ್ದಾರೆ. ‘ಎಲ್ಲ ಸವಾಲುಗಳ ಮಧ್ಯೆ, ಸಂವಿಧಾನದ ಮೂರು ಆಧಾರ ಸ್ತಂಭಗಳು ಅನೇಕ ಬಾರಿ ದೇಶಕ್ಕೆ ಸರಿಯಾದ ಮಾರ್ಗವನ್ನು ತೋರಿಸಿಕೊಟ್ಟಿವೆ. ಇಂತಹ ಶ್ರೀಮಂತ ಸಂಪ್ರದಾಯ ಭಾರತದಲ್ಲಿ ಬೆಳೆದಿದೆ ಎಂಬ ನಮಗೆ ಹೆಮ್ಮೆ ಇದೆ. ಕಳೆದ ಐದು ವರ್ಷಗಳಲ್ಲಿ ದೇಶದ ವಿವಿಧ ಸಂಸ್ಥೆಗಳು ಈ ಸಂಪ್ರದಾಯವನ್ನು ಬಲಪಡಿಸಿವೆ’ ಎಂದು ಅವರು ಶ್ಲಾಘಿಸಿದ್ದಾರೆ.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 