ಸಂವಿಧಾನದ ಮೂರು ಆಧಾರ ಸ್ತಂಭಗಳು ಸಮತೋಲನ ಕಾಯ್ದುಕೊಂಡಿವೆ-ಪ್ರಧಾನಿ ಮೋದಿ
ನವದೆಹಲಿ, ಫೆ 22 : ಎಲ್ಲ ಸವಾಲುಗಳ ಮಧ್ಯೆ, ರಾಷ್ಟ್ರಕ್ಕೆ ಮಾರ್ಗದರ್ಶನ ತೋರಲು ಸಂವಿಧಾನದ ಮೂರು ಆಧಾರ ಸ್ತಂಭಗಳಾದ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗ ಸಮತೋಲನವನ್ನು ಕಾಯ್ದುಕೊಂಡಿದ್ದು, ದೇಶವನ್ನು ಸರಿಯಾದ ಹಾದಿಯಲ್ಲಿ ಸಾಗಿಸಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶನಿವಾರ ಇಲ್ಲಿ ನಡೆದ ಅಂತಾರಾಷ್ಟ್ರೀಯ ನ್ಯಾಯಾಂಗ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ದೇಶದಲ್ಲಿ ಕಾನೂನು ನಿಯಮ ಭಾರತದ ಸಾರ್ವಜನಿಕ ನೀತಿಯ ಮೂಲಾಧಾರವಾಗಿದೆ ಎಂದು ಹೇಳಿದ್ದಾರೆ. ‘ಎಲ್ಲ ಸವಾಲುಗಳ ಮಧ್ಯೆ, ಸಂವಿಧಾನದ ಮೂರು ಆಧಾರ ಸ್ತಂಭಗಳು ಅನೇಕ ಬಾರಿ ದೇಶಕ್ಕೆ ಸರಿಯಾದ ಮಾರ್ಗವನ್ನು ತೋರಿಸಿಕೊಟ್ಟಿವೆ. ಇಂತಹ ಶ್ರೀಮಂತ ಸಂಪ್ರದಾಯ ಭಾರತದಲ್ಲಿ ಬೆಳೆದಿದೆ ಎಂಬ ನಮಗೆ ಹೆಮ್ಮೆ ಇದೆ. ಕಳೆದ ಐದು ವರ್ಷಗಳಲ್ಲಿ ದೇಶದ ವಿವಿಧ ಸಂಸ್ಥೆಗಳು ಈ ಸಂಪ್ರದಾಯವನ್ನು ಬಲಪಡಿಸಿವೆ’ ಎಂದು ಅವರು ಶ್ಲಾಘಿಸಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 