ಸಾರಿಗೆ ಕಾರ್ಮಿಕರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಲು ಬಜೆಟ್ ನಲ್ಲಿ ಪ್ರಸ್ತಾಪಿಸಬೇಕೆಂದು ಡಾ.ಮಹೇಶ್ ಜೋಶಿ ಆಗ್ರಹ
ಬೆಂಗಳೂರು,ಫೆ.14: ಆಂಧ್ರ ಪ್ರದೇಶದ ಮಾದರಿಯಲ್ಲಿ ಸಾರಿಗೆ ಕಾರ್ಮಿಕರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಲು ಬಜೆಟ್ ನಲ್ಲಿ ಪ್ರಸ್ತಾವನೆಯನ್ನಿಡಬೇಕೆಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸಮನ್ವಯ ಕನ್ನಡ ಸಂಘದ ಗೌರವಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆ ಎಸ್ ಆರ್ ಟಿಸಿ ಸಾರಿಗೆ ಸಾಂಸ್ಥೆಯಲ್ಲಿ ಒಟ್ಟು 1 ಲಕ್ಷದ 26 ಸಾವಿರ ಸಾರಿಗೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಚಾಲಕ, ನಿರ್ವಾಹಕ, ಮೆಕಾನಿಕಲ್ ಹಾಗೂ ಇನ್ನಿತರ ಕಾರ್ಮಿಕರಿಗೆ ಇಂದಿಗೂ ಉದ್ಯೋಗ ಭದ್ರತೆ ಇಲ್ಲ. ಜೊತೆಗೆ ಸರ್ಕಾರಿ ಸಂಸ್ಥೆ ನೌಕರರಿಗೆ ಮತ್ತು ಸಾರಿಗೆ ಕಾರ್ಮಿಕರಿಗೆ ನೀಡಲಾಗುತ್ತಿರುವ ವೇತನದಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಮುಂಬರುವ ಬಜೆಟ್ ನಲ್ಲಿ ಆಂದ್ರಪ್ರದೇಶದ ಮಾದರಿಯಲ್ಲಿ ಸಾರಿಗೆ ಕಾರ್ಮಿಕರನ್ನು ಸಾರ್ಕಾರಿ ನೌಕರರನ್ನಾಗಿ ಮಾಡುವ ಕುರಿತು ಪ್ರಸ್ತಾಪ ಮಾಡಬೇಕೆಂದು ಆಗ್ರಹಿಸಿದರು. ಕಳೆದ ವರ್ಷ ನಾಲ್ಕು ನಿಗಮಗಳ ಸಾರಿಗೆ ಕಾರ್ಮಿಕರನ್ನು ಸರ್ಕಾರದಲ್ಲಿ ವಿಲೀನ ಮಾಡುವ ಬಗ್ಗೆ ರಾಜ್ಯ ಸರ್ಕಾರವು ಸಮಿತಿ ರಚನೆ ಮಾಡಿ ವರದಿ ನೀಡುವಂತೆ ನಿದರ್ಶನ ನೀಡಲಾಗಿತ್ತು. ಆದರೆ ಸಮಿತಿಯು ಐದು ತಿಂಗಳಾದರೂ ಸರ್ಕಾರಕ್ಕೆ ವರದಿಯನ್ನು ನೀಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ. ಹೀಗಾಗಿ ಸಮಿತಿಯನ್ನು ಕೂಡಲೇ ರದ್ದುಪಡಿಸಿ ಸಾರಿಗೆ ಕಾರ್ಮಿಕರ ಬೇಡಿಕೆಗಳಿಗೆ ಅನುಗುಣವಾಗಿ ಸಾರಿಗೆ ಕಾರ್ಮಿಕರನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕು ಎಂದು ಮನವಿ ಮಾಡಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 