ದಿನಪತ್ರಿಕೆ ವರದಿಗಾರರಿಗೆ ಕಡೆಗಣಿಸಿದ ತಹಶೀಲ್ದಾರ್ ಕಟ್ಟಿಮನಿ
Tahsildar Kattimani ignored daily newspaper reporters
ಹುಕ್ಕೇರಿ 20: ಸ್ವಾತಂತ್ರ್ಯೋತ್ಸವದ ಅಂಗವಾಗಿ ತಹಶೀಲ್ದಾರ್ ಕಚೇರಿಯಿಂದ ಹಮ್ಮಿಕೊಳ್ಳಲಾದ ಪೂರ್ವಭಾವಿ ಸಭೆ ಹಾಗೂ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ದಿನಪತ್ರಿಕೆ ವರದಿಗಾರರಿಗೆ ಆಹ್ವಾನ ನೀಡದೆ ಕಡೆಗಣಿಸಿರುವುದು ಪತ್ರಿಕಾ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.
ತಹಶೀಲ್ದಾರ್ ಕಟ್ಟಿಮನಿ ಅವರ ಕಚೇರಿಯಲ್ಲಿ ಆಯೋಜಿಸಲಾದ ಸತ್ಯನಾರಾಯಣ ಪೂಜೆಗೂ ಸಹ ದಿನಪತ್ರಿಕೆ ವರದಿಗಾರರಿಗೆ ಆಹ್ವಾನ ನೀಡದೇ ಇರುವುದು ಪತ್ರಕರ್ತರಿಗೆ ಅವಮಾನಿಸಿದಂತೆ ಕಂಡುಬಂದಿದೆ. ಆದರೆ ಕೆಲವೇ ಸೀಮಿತ ಪತ್ರಕರ್ತರಿಗೆ ಮಾತ್ರ ಆಹ್ವಾನ ನೀಡಿರುವುದು ಸ್ಪಷ್ಟವಾಗಿದ್ದು, ಉಳಿದ ದಿನಪತ್ರಿಕೆ ವರದಿಗಾರರನ್ನು ಕಡೆಗಣಿಸಿರುವುದು ಪ್ರಶ್ನಾರ್ಹವಾಗಿದೆ. ಈ ನಡೆಗೆ ವಿರೋಧ ವ್ಯಕ್ತಪಡಿಸಿರುವ ಸ್ಥಳೀಯ ವರದಿಗಾರರು, “ಪತ್ರಕರ್ತರು ಜನಸಾಮಾನ್ಯರ ಧ್ವನಿ. ಅವರನ್ನೇ ಕಡೆಗಣಿಸುವುದು ಸೂಕ್ತವಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.
ಇನ್ನು ಮುಂದೆ ಆದರೂ ತಮ್ಮ ಕಚೇರಿಯ ಲ್ಲಿ ನಡೆಯುವ ಸಭೆ ಸಮಾರಂಭಗಳಿಗೆ ಪತ್ರಕರ್ತರನ್ನು ಆಹ್ವಾನಿಸಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ತಾಲೂಕ ಅಧ್ಯಕ್ಷರಾದ ಸುನೀಲ್ ಲಾಳಗೆ ಹಾಗೂ ಎಲ್ಲ ಪತ್ರಕರ್ತರಿಂದ ಮನವಿ ಮಾಡಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 