ತಹಶೀಲ್ದಾರ್ ಮಂಜುನಾಥ ನಾಯಕ ಅಧಿಕಾರ ಸ್ವೀಕಾರ
Tahsildar Manjunath Nayak assumes office
ಕಂಪಿ 12; ಸ್ಥಳೀಯ ತಹಶೀಲ್ದಾರ್ ಕಛೇರಿಯಲ್ಲಿ ನೂತನ ತಹಶೀಲ್ದಾರ್ ಆಗಿ ಮಂಜುನಾಥ ನಾಯಕ ಇವರು ಸೋಮವಾರ ಅಧಿಕಾರ ಸ್ವೀಕರಿಸಿದರು. ಒಂದು ವರ್ಷಕ್ಕೂ ಹೆಚ್ಚು ಅವಧಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಶಿವರಾಜ ಶಿವಪುರ ಇವರ ಜಾಗಕ್ಕೆ ನೂತನ ತಹಶೀಲ್ದಾರ್ ಆಗಿ ಮಂಜುನಾಥ ಅಧಿಕಾರವಹಿಸಿಕೊಂಡರು.
ಶಿವರಾಜ ಅವರಿಗೆ ಯಾವುದೇ ಸ್ಥಳವನ್ನು ತೋರಿಸಿಲ್ಲ. ಮಂಜುನಾಥ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಮಂಜುನಾಥ ನಾಯಕ ಮಾತನಾಡಿ, ಈ ಹಿಂದೆ ಬಳ್ಳಾರಿಯಲ್ಲಿ ಗ್ರೇಡ್-2 ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುವೆ. ಕೆಲವು ಕಡೆಗಳಲ್ಲಿ ಸೇವೆ ಸಲ್ಲಿಸಿದ ಅನುಭವವಿದೆ. ಇಲ್ಲಿನ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಕಚೇರಿಯ ಸಂಪೂರ್ಣ ಮಾಹಿತಿ ಪಡೆದ ಬಳಿಕ ಆಡಳಿತಕ್ಕೆ ಚುರುಕು ನೀಡಲಾಗುತ್ತದೆ. ಆಡಳಿತಾತ್ಮಕ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಲಾಗುವುದು. ಸಾರ್ವಜನಿಕರು ಮತ್ತು ರೈತರನ್ನು ಅನಗತ್ಯವಾಗಿ ಕಚೇರಿಗೆ ಅಲೆಯುವುದಕ್ಕೆ ಕಡಿವಾಣ ಹಾಕಲಾಗುವುದು’ ಎಂದು ತಿಳಿಸಿದರು. ಇಲ್ಲಿನ ಸಿಬ್ಬಂದಿ ವರ್ಗದವರು ನೂತನ ತಹಶೀಲ್ದಾರರಿಗೆ ಮಾಲಾರೆ್ಣ ಮಾಡುವ ಮೂಲಕ ಸ್ವಾಗತಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 