ಸರಕಾರಿ ಯೋಜನೆಗಳ ಸದುಪಯೋಗ ಪಡೆದುಕೊಂಡು ಉತ್ತಮ ಜೀವನ ನಡೆಸಬೇಕು : ಬಸವರಾಜ ಶಿವಣ್ಣನವರ
Take advantage of government schemes and lead a better life: Basavaraja Sivannavara
ಸರಕಾರಿ ಯೋಜನೆಗಳ ಸದುಪಯೋಗ ಪಡೆದುಕೊಂಡು ಉತ್ತಮ ಜೀವನ ನಡೆಸಬೇಕು : ಬಸವರಾಜ ಶಿವಣ್ಣನವರ
ಬ್ಯಾಡಗಿ 09: ವಿಶೇಷ ಚೇತನರು, ಅಂಗವಿಕಲರು ಮುಖ್ಯವಾಹಿನಿಗೆ ಬರಲು ಸರಕಾರ ವಿವಿಧ ಯೋಜನೆಗಳನ್ನು ರೂಪಿಸಿ ಸೌಲಭ್ಯ ಒದಗಿಸುತ್ತಿದ್ದು, ಸರಕಾರಿ ಯೋಜನೆಗಳ ಸದುಪಯೋಗ ಪಡೆದುಕೊಂಡು ಉತ್ತಮ ಜೀವನ ನಡೆಸಬೇಕೆಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.ಅವರು ಪಟ್ಟಣದ ಕನಕದಾಸ ಕಲಾಭವನದಲ್ಲಿ ವಿಶೇಷ ಚೇತನರಿಗೆ ಬ್ಯಾಟ್ರಿ ಚಾಲಿತ ತ್ರಿಚಕ್ರ ವಾಹನ ವಿತರಿಸಿ ಮಾತನಾಡಿದರು. ಗಾಡಿ ನಡೆಸುವಾಗ ತಮ್ಮ ಕುಟುಂಬದ ಸದಸ್ಯರ ನೆನಪಿಟ್ಟುಕೊಂಡು ವಾಹನ ಚಲಾಯಿಸಬೇಕು.ಅಂಗವಿಕಲರ ಸ್ವಾವಲಂಬಿ ಬದುಕಿಗೆ ಹಾಗೂ ಸುಧಾರಣೆಗೆ ತ್ರಿಚಕ್ರ ವಾಹನಗಳು ಸಹಕಾರಿಯಾಗಲಿವೆ.
ಇದರ ಸದುಪಯೋಗವನ್ನು ಪ್ರತಿಯೊಬ್ಬರು ಪಡೆದು ತಮ್ಮ ಕುಟುಂಬದ ಏಳ್ಗೇಗೆಗಾಗಿ ಹೆಗಲು ಕೊಡಬೇಕೆಂದರು.ಅಂಗವಿಕಲರು ಎಂದರೇ ಅಸಮರ್ಥರು ಎನ್ನುವ ತಪ್ಪು ಭ್ರಮೆ ಬೇಡ. ಅವರಲ್ಲಿಯೂ ವಿಶೇಷ ಸಾಮರ್ಥ್ಯ ಇರುತ್ತದೆ. ನಿರಂತರ ಶ್ರಮ ವಹಿಸುವ ಮೂಲಕ ಸಾಧನೆಯ ಹಾದಿ ಹಿಡಿಯಬೇಕೆಂದರು. ವೇದಿಕೆಯಲ್ಲಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಮಲ್ಲಿಕಾರ್ಜುನ, ಪಟ್ಟಣದ ಆಶ್ರಯ ಸಮಿತಿ ಅಧ್ಯಕ್ಷ ಅಬ್ದುಲ್ ಮುನಾಫ್ ಎರೇಸಿಮಿ, ಆಶ್ರಯ ಸಮಿತಿಯ ನಿರ್ದೇಶಕರಾದ ದುರ್ಗೇಶ ಗೋಣೆಮ್ಮನವರ, ಲಕ್ಷ್ಮಿ ಬಂಬಲಾಪುರ, ಗೀರೀಶ ಇಂಡಿಮಠ, ಅಬ್ದುಲ್ ಮಜೀದ್ ಮುಲ್ಲಾ, ಸುಮಂಗಲಾ ರಾರಾವಿ, ಜೈ ಭೀಮ್ ರಾರಾವಿ, ಅಂಗವಿಕಲ ಇಲಾಖೆಯ ನಾಗರಾಜ್, ರಾಜೆಸಾಬ ಕಳ್ಯಾಳ, ಸೇರಿದಂತೆ ಇತರರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 