ಯೋಜನೆಯ ಲಾಭ ಪಡೆದುಕೊಳ್ಳಿ: ವೀರಣ್ಣಾ ವಾಲಿ
Take advantage of the scheme: Veeranna Vali
ವಿಶೇಷ ಚೇತನರಿಗೆ ನರೇಗಾ ಜಾಬ್ ಕಾರ್ಡ ವಿತರಣೆ;
ಕಾಗವಾಡ 12: ಸರ್ಕಾರ ವಿಶೇಷ ಚೇತನರಿಗಾಗಿ ಉದ್ಯೋಗ ಖಾತ್ರಿ ಯೋಜನೆಯಡಿ 100 ದಿನಗಳ ಉದ್ಯೋಗವನ್ನು ಖಾತ್ರಿಪಡಿಸಿದ್ದು, ಗ್ರಾಮದ ವಿಶೇಷ ಚೇತನರು ಇದರ ಲಾಭ ಪಡೆದುಕೊಳ್ಳಬೇಕೆಂದು ತಾಲೂಕ ಪಂಚಾಯತಿ ಇಓ ವೀರಣ್ಣ ವಾಲಿ ತಿಳಿಸಿದ್ದಾರೆ.
ಅವರು ಶುಕ್ರವಾರ ದಿ. 11 ತಾಲೂಕಿನ ಮಂಗಸೂಳಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಗ್ರಾಮದ 73 ವಿಶೇಷ ಚೇತನರಿಗೆ ಜಾಬ್ ಕಾರ್ಡ್ ವಿತರಿಸಿ, ಮಾತನಾಡುತ್ತಿದ್ದರು. ಸರ್ಕಾರ ಈಗಾಗಲೇ ನರೇಗಾ ಯೋಜನೆ ಅಡಿ ಗ್ರಾಮದ ಪ್ರತಿ ಕುಟುಂಬಗಳಿಗೆ 100 ದಿನಗಳ ಉದ್ಯೋಗ ಖಾತ್ರಿಯನ್ನು ನೀಡಿದೆ. ಇದರ ಜೊತೆಗೆ ಈಗ ಕುಟುಂಬದ ಸದಸ್ಯರಲ್ಲಿ ವಿಶೇಷ ಚೇತನರಿದ್ದರೇ ಅವರಿಗಾಗಿಯೇ ನೂರು ದಿನಗಳ ಉದ್ಯೋಗ ಖಾತ್ರಿ ನೀಡಿದ್ದು, ಅವರ ಕೂಲಿ ಕೆಲಸದ ಅವಧಿಯಲ್ಲಿ ಶೇ. 50 ರಷ್ಟು ರಿಯಾಯತಿ ಕೂಡಾ ನೀಡಿದ್ದಾರೆ. ಇದರಿಂದ ವಿಶೇಷ ಚೇತನರು ಸ್ವಾವಲಂಬಿ ಜೀವನ ಸಾಗಿಸಲು ಅನುಕೂಲವಾಗಲಿದೆ ಎಂದರು.
ಈ ಸಮಯದಲ್ಲಿ ತಹಶೀಲ್ದಾರ ರಾಜೇಶ ಬುರ್ಲಿ, ಮುಖಂಡರಾದ ರವೀಂದ್ರ ಪೂಜಾರಿ, ಗ್ರಾ.ಪಂ. ಅಧ್ಯಕ್ಷ ಬಾಳು ಭಜಂತ್ರಿ, ಉಪಾಧ್ಯಕ್ಷೆ ಸವೀತಾ ಪಾಟೀಲ, ಪಿಡಿಓ ಸಂಜಯ ಸೂರ್ಯವಂಶಿ ಸೇರಿದಂತೆ ಗ್ರಾ.ಪಂ. ಸದಸ್ಯರು, ವಿಕಲಚೇತನ ಫಲಾನುಭವಿಗಳು, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 