ಅಂಬೇಡ್ಕರ್ ಅವರ ಆಶಯದಂತೆ ಒಳ್ಳೆಯ ಭವಿಷ್ಯ ಕಟ್ಟಿಕೊಳ್ಳಲು ಮುಂದಾಗಿ: ಶಾಸಕ ಜೆ.ಎನ್.ಗಣೇಶ
Take steps to build a good future as per Ambedkar's wishes: MLA J.N. Ganesh
ಕಂಪ್ಲಿ:19. ಅಂಬೇಡ್ಕರ್ ನೀಡಿದ ಸಂವಿಧಾನದ ಆಶಯದಂತೆ ಒಳ್ಳೆಯ ಭವಿಷ್ಯ ಕಟ್ಟಿಕೊಳ್ಳಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.
ತಾಲೂಕಿನ ಸಣಾಪುರ ಗ್ರಾಮದಲ್ಲಿ ಗುರುವಾರ ಅಂಬೇಡ್ಕರ್ ಸಂಘದಿಂದ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ನೂತನ ಪುತ್ಥಳಿ ಅನಾವರಣಗೊಳಿಸಿದ ನಂತರ ವೇದಿಕೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಶಿಕ್ಷಣದಿಂದ ಸಮಾಜದ ಬದಲಾವಣೆ ಸಾಧ್ಯ. ಅಂಬೇಡ್ಕರ್ ಅವರ ಕನಸಿನಂತೆ ಮಕ್ಕಳು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು. ಮುಂದಿನ ಗುರಿಯೊಂದಿಗೆ ಸಾಧನೆ ಮಾಡಬೇಕು. ಸಂವಿಧಾನದಿಂದ ಸಾಕಷ್ಟು ಹಕ್ಕುಗಳನ್ನು ಪಡೆಯಲಾಗುತ್ತಿದೆ. ಮೂಢನಂಬಿಕೆ ಬಿಟ್ಟು, ಆರ್ಥಿಕವಾಗಿ ಸಬಲರಾಗಬೇಕು. ಅಂಬೇಡ್ಕರ್ ಅವರ ತತ್ವಸಿದ್ದಾಂತಗಳು ಮತ್ತು ಚಿರಿತ್ರೆಗಳನ್ನು ಜ್ಞಾನವನ್ನು ಮಕ್ಕಳಲ್ಲಿ ಮೂಡಿಸಬೇಕು. ಮಕ್ಕಳಿಗೆ ಮೋಬೈಲ್ಬದಲು.ಪುಸ್ತಕ.ಕೊಡುವುದರ ಜೊತೆಗೆ ಸಂಸ್ಕೃತಿ, ಸಂಸ್ಕಾರ ಕಲಿಸಬೇಕು ಎಂದರು.ಎಮ್ಮಿಗನೂರು ಪಂಪಾಪತಿ ಅವರು ಉಪನ್ಯಾಸ ನೀಡಿದರು. ಮುಖಂಡ ಮರಿಸ್ಚಾಮಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ತದನಂತರ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ರಮಣಯ್ಯ, ಕಂಪ್ಲಿ ತಾಲೂಕು ವ್ಯವಹಾಯೋತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ ಕೆ.ಭಾಸ್ಕರ್, ಮುಖಂಡರಾದ ಎ.ಮಾನಯ್ಯ, ಪಿ.ಮೂಕಯ್ಯಸ್ಚಾಮಿ, ವೆಂಕಟರಾಮರಾಜು, ಶರಣಗೌಡ, ಸಿ.ಆರ್.ಹನುಮಂತ, ಕೆ.ಷಣ್ಮುಕಪ್ಪ, ಜಿ.ರಾಮಣ್ಣ, ವೀರಾಂಜೀನೀಯಲು, ಹನುಮಂತಪ್ಪ, ಎನ್.ಗಂಗಣ್ಣ, ಹೆಚ್.ಗುಂಡಪ್ಪ, ಮರಿಯಪ್ಪ, ಪಕ್ಕೀರ್ಪ, ಆರ್.ಎಂ.ರಾಮಯ್ಯ, ಅಂಬೇಡ್ಕರ್ ಸಂಘದ ಎಸ್.ರಾಮು, ವಿಜಯಕುಮಾರ, ವೆಂಕಟೇಶ, ದೇವಪುತ್ರ, ಹುಸೇನಿ, ರವಿ, ಲೋಕೇಶ, ಮಂಜು, ಪಂಪಾಪತಿ, ಮಲ್ಲೇಶ ಸೇರಿದಂತೆ ಅನೇಕರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 