ಅಂಬೇಡ್ಕರ್ ಅವರ ಆಶಯದಂತೆ ಒಳ್ಳೆಯ ಭವಿಷ್ಯ ಕಟ್ಟಿಕೊಳ್ಳಲು ಮುಂದಾಗಿ: ಶಾಸಕ ಜೆ.ಎನ್.ಗಣೇಶ
Take steps to build a good future as per Ambedkar's wishes: MLA J.N. Ganesh
ಕಂಪ್ಲಿ:19. ಅಂಬೇಡ್ಕರ್ ನೀಡಿದ ಸಂವಿಧಾನದ ಆಶಯದಂತೆ ಒಳ್ಳೆಯ ಭವಿಷ್ಯ ಕಟ್ಟಿಕೊಳ್ಳಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.
ತಾಲೂಕಿನ ಸಣಾಪುರ ಗ್ರಾಮದಲ್ಲಿ ಗುರುವಾರ ಅಂಬೇಡ್ಕರ್ ಸಂಘದಿಂದ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ನೂತನ ಪುತ್ಥಳಿ ಅನಾವರಣಗೊಳಿಸಿದ ನಂತರ ವೇದಿಕೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಶಿಕ್ಷಣದಿಂದ ಸಮಾಜದ ಬದಲಾವಣೆ ಸಾಧ್ಯ. ಅಂಬೇಡ್ಕರ್ ಅವರ ಕನಸಿನಂತೆ ಮಕ್ಕಳು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು. ಮುಂದಿನ ಗುರಿಯೊಂದಿಗೆ ಸಾಧನೆ ಮಾಡಬೇಕು. ಸಂವಿಧಾನದಿಂದ ಸಾಕಷ್ಟು ಹಕ್ಕುಗಳನ್ನು ಪಡೆಯಲಾಗುತ್ತಿದೆ. ಮೂಢನಂಬಿಕೆ ಬಿಟ್ಟು, ಆರ್ಥಿಕವಾಗಿ ಸಬಲರಾಗಬೇಕು. ಅಂಬೇಡ್ಕರ್ ಅವರ ತತ್ವಸಿದ್ದಾಂತಗಳು ಮತ್ತು ಚಿರಿತ್ರೆಗಳನ್ನು ಜ್ಞಾನವನ್ನು ಮಕ್ಕಳಲ್ಲಿ ಮೂಡಿಸಬೇಕು. ಮಕ್ಕಳಿಗೆ ಮೋಬೈಲ್ಬದಲು.ಪುಸ್ತಕ.ಕೊಡುವುದರ ಜೊತೆಗೆ ಸಂಸ್ಕೃತಿ, ಸಂಸ್ಕಾರ ಕಲಿಸಬೇಕು ಎಂದರು.ಎಮ್ಮಿಗನೂರು ಪಂಪಾಪತಿ ಅವರು ಉಪನ್ಯಾಸ ನೀಡಿದರು. ಮುಖಂಡ ಮರಿಸ್ಚಾಮಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ತದನಂತರ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ರಮಣಯ್ಯ, ಕಂಪ್ಲಿ ತಾಲೂಕು ವ್ಯವಹಾಯೋತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ ಕೆ.ಭಾಸ್ಕರ್, ಮುಖಂಡರಾದ ಎ.ಮಾನಯ್ಯ, ಪಿ.ಮೂಕಯ್ಯಸ್ಚಾಮಿ, ವೆಂಕಟರಾಮರಾಜು, ಶರಣಗೌಡ, ಸಿ.ಆರ್.ಹನುಮಂತ, ಕೆ.ಷಣ್ಮುಕಪ್ಪ, ಜಿ.ರಾಮಣ್ಣ, ವೀರಾಂಜೀನೀಯಲು, ಹನುಮಂತಪ್ಪ, ಎನ್.ಗಂಗಣ್ಣ, ಹೆಚ್.ಗುಂಡಪ್ಪ, ಮರಿಯಪ್ಪ, ಪಕ್ಕೀರ್ಪ, ಆರ್.ಎಂ.ರಾಮಯ್ಯ, ಅಂಬೇಡ್ಕರ್ ಸಂಘದ ಎಸ್.ರಾಮು, ವಿಜಯಕುಮಾರ, ವೆಂಕಟೇಶ, ದೇವಪುತ್ರ, ಹುಸೇನಿ, ರವಿ, ಲೋಕೇಶ, ಮಂಜು, ಪಂಪಾಪತಿ, ಮಲ್ಲೇಶ ಸೇರಿದಂತೆ ಅನೇಕರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 