ಇಂದಿನ ಒತ್ತಡದ ಜೀವನದಲ್ಲಿ ಆರೋಗ್ಯದ ಕಾಳಜಿ ವಹಿಸುವುದು ಅವಶ್ಯಕ: ಪಾಟೀಲ
Taking care of health is essential in today's stressful life: Patil
ರಾಯಬಾಗ 21: ಇಂದಿನ ಒತ್ತಡದ ಜೀವನದಲ್ಲಿ ಆರೋಗ್ಯದ ಅದರಲ್ಲಿಯೂ ಹೃದಯ ರೋಗದ ಕಾಳಜಿ ವಹಿಸುವುದು ಅತೀ ಅವಶ್ಯಕವಾಗಿದೆ ಎಂದು ಡಾ.ವರ್ಷಾ ವಿವೇಕರಾವ ಪಾಟೀಲ ಹೇಳಿದರು.
ಭಾನುವಾರ ಪಟ್ಟಣದ ವಿವೇಕಾನಂದ ಕನ್ನಡ ಶಾಲೆಯ ಆವರಣದಲ್ಲಿ ಆದರ್ಶ ಮಲ್ಟಿ ಸ್ಪೇಷಲಿಸ್ಟ್ ಆಸ್ಪತ್ರೆ ಅಂಕಲಿ ಹಾಗೂ ಅಭಾಜಿ ಫೌಂಡೇಶನ್ ರಾಯಬಾಗ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಬಿ.ಆರ್.ಅಂಬೇಡಕರ ಅವರ ಜಯಂತಿಯ ನಿಮಿತ್ಯ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿ ದೊಡ್ಡ ಕಾಯಿಲೆಗಳಿಗೆ ಖರ್ಚು ಮಾಡುವಷ್ಟು ಬಡವರು ಶಕ್ತರಾಗಿರುವದಿಲ್ಲ. ಆದ್ದರಿಂದ ಇಂಥಹ ಉಚಿತ ಆರೋಗ್ಯ ಮೇಳಗಳಲ್ಲಿ ತಪಾಸಣೆ ಮಾಡಿಸಿಕೊಂಡು ಕಾಯಿಲೆ ಕಡಿಮೆ ಪ್ರಮಾಣದಲ್ಲಿರುವಾಗಲೇ ಚಿಕಿತ್ಸೆ ಪಡೆದುಕೊಂಡರೆ ಬೇಗನೇ ಗುಣಮುಖರಾಗಲು ಸಾದ್ಯವೆಂದರು. ಇಂದಿನ ಮಹಿಳೆಯರಲ್ಲಿ ಹೆಚ್ಚಾಗಿ ಕಾಡುತ್ತಿರುವ ಬಂಜೆತನಕ್ಕೆ ಕಾರಣಗಳ ಕುರಿತು ವಿವರಿಸಿ ಬಂಜೆತನಕ್ಕೆ ಹೆದರುವ ಅವಶ್ಯಕತೆ ಇಲ್ಲ ವೈಜ್ಞಾನಿಕತೆ ಸಾಕಷ್ಟು ಮುಂದುವರೆದಿದೆ. ಸರಿಯಾದ ಸಮಯಕ್ಕೆ ಸರಿಯಾಗಿ ಓಷಧೋಪಚಾರ ಮಾಡಿಕೊಂಡರೆ ಯಾವುದೇ ತೊಂದರೆ ಇಲ್ಲವೆಂದರು.
ಡಾ.ರಾಹುಲ ಬಂತೆ, ಡಾ.ಐ.ಐ.ಮುಲ್ಲಾ, ಡಾ.ವಾಯ್.ಎಸ್.ಬಂತೆ ಆರೋಗ್ಯ ತಪಾಸಣೆ ನಡೆಸಿದರು. ಆಕರ್ಷ ಮಲ್ಟಿ ಸ್ಪೆಷಲಿಸ್ಟ್ ಆಸ್ಪತ್ರೆಯ ಮೆನೇಜಿಂಗ ಡೈರೆಕ್ಟರ ಡಾ.ದಯಾನಂದ ಕೋರೆಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಆದರ್ಶ ಆಸ್ಪತ್ರೆಯ ಡಾ.ಆದರ್ಶ ವಸವಾಡೆ, ಡಾ.ಸೋನಾಲಿ ವಸವಾಡೆ, ಡಾ.ಪುರುಷೋತ್ತಮ ಹೂಗಾರ, ಡಾ.ಮಹೇಶ ಮನಗೂಳಿ ಹಾಗೂ ಅಭಾಜಿ ಫೌಂಡೇಶನ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 