ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ
Talent Fountain helps identify talent in students
ಹನುಮಸಾಗರ 29: ವಿದ್ಯಾರ್ಥಿಗಳಲ್ಲಿನ ಎಲೆಮರೆಯ ಕಾಯಂತೆ ಇರುವ ಪ್ರತಿಭೆಯನ್ನು ಗುರುತಿಸಲು ವೇದಿಕೆ ಕಲ್ಪಿಸಿರುವುದು ನಿಜಕ್ಕೂ ಶ್ಲಾಘನೀಯ ಎಂದು ಪಿಡಿಒ ನಿಂಗಪ್ಪ ಮೂಲಿಮನಿ ಹೇಳಿದರು. ಪಟ್ಟಣದ ಸರ್ವೋದಯ ಹಿರಿಯ ಮತ್ತು ಪ್ರೌಢ ಶಾಲೆಯ ಸಹಯೋಗದಲ್ಲಿ ಹನುಮಸಾಗರ ಕ್ಲಸ್ಟರ ಮಟ್ಟದ ಪ್ರತಿಭಾ ಕಾರಂಜಿ-ಕಲಲೋತ್ಸವವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಗ್ರಾಮೀಣ ಭಾಗದಲ್ಲಿ ಆಧುನಿಕತೆಗೆ ತಕ್ಕಂತೆ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ಮಕ್ಕಳಲ್ಲಿ ಹಲವು ಆಯಾಮಗಳಲ್ಲಿ ಮಕ್ಕಳಲ್ಲಿನ ಪ್ರತಿಭೆಗಳನ್ನು ಗುರುತಿಸಿ ಅನಾವರಣಗೊಳಿಸುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಸಿಆರ್ ಪಿ ಲೆಂಕಪ್ಪ ವಾಲಿಕಾರ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಶಿಕ್ಷಣ ಇಲಾಖೆ ಮಕ್ಕಳಲ್ಲಿನ ಕಂಟ ಪಾಠ, ಭಾಷಣ, ಪ್ರಭಂದ ಸ್ಪರ್ಧೆ, ಜನಪದ ನೃತ್ಯ ಸೇರಿದಂತೆ ಸೃಜನಾತ್ಮಕ ಕೌಶಲ್ಯಗಳನ್ನು ಬೆಳೆಸುವಲ್ಲಿ ಪ್ರತಿಭಾಕಾರಂಜಿ ಪೂರಕವಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿಸರ್ವೋದಯ ಶಾಲೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀನಿವಾಸ್ ಜಹಗೀರದಾರ, ಪ್ರಹ್ಲಾದ ಆಚಾರ ಪೂಜಾರ, ವಿಜೇಂದ್ರ ಕುಲಕರ್ಣಿ, ಮುದಿಯಪ್ಪ ವಾಲ್ಮೀಕಿ, ವಿಶ್ವನಾಥ ನಾಗೂರ, ಬಾಲಕರ ಮುಖ್ಯಶಿಕ್ಷಕ ಬಸಪ್ಪ ಬಂಡಿವಡ್ಡರ, ಕಬ್ಬರಗಿ ಶಾಲೆಯ ಯಲ್ಲನಗೌಡ ಪಾಟೀಲ, ಕುರುಬಗೇರ ಶಾಲೆಯ ಚಂದಪ್ಪ ಹಕ್ಕಿ, ಸುರೇಶ, ಅಶೋಕ ಕಟ್ಟಿಮನಿ, ಮಾರುತಿ ರಂಗ್ರೇಜ, ಭಾರತಿ ದೇಸಾಯಿ, ಗೌರಮ್ಮ ತಳವಾರ ಸೇರಿದಂತೆ ಹನುಮಸಾಗರ ಕ್ಲಸ್ಟರ ಮಟ್ಟದ ವಿವಿಧ ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 