ವಿದ್ಯಾರ್ಥಿಗಳ ಭವಿಷ್ಯ ರೂಪಿಸಿಕೊಳ್ಳಲು ಪ್ರತಿಭಾ ಕಾರಂಜಿ ಸಹಕಾರಿ
Talent Fountain helps shape students' futures
ಕಂಪ್ಲಿ 24: ವಿದ್ಯಾರ್ಥಿಗಳ ಕಲಿಕೆಯ ಜತೆಗೆ ಪ್ರತಿಭೆಗಳಿಗೆ ಅವಕಾಶಗಳು ಒದಗಿಸಿದಾಗ ವಿದ್ಯಾರ್ಥಿಗಳಿಗೆ ಭವಿಷ್ಯ ರೂಪಿಸಿಕೊಳ್ಳಲು ಸಹಾಯಕಾರಿಯಾಗಲಿದೆ ಎಂದು ಬಿಎಸ್ವಿ ಸಂಸ್ಥೆಯ ಅಧ್ಯಕ್ಷ ಕಲ್ಗುಡಿ ವಿಶ್ವನಾಥ ಹೇಳಿದರು.ಪಟ್ಟಣದ ಬಿಎಸ್ವಿ ಶಾಲೆಯಲ್ಲಿ 8ನೇ ವಾರ್ಡಿನ ಸಮೂಹ ಸಂಪನ್ಮೂಲ ಕೇಂದ್ರದಿಂದ ಮಂಗಳವಾರ ಹಮ್ಮಿಕೊಂಡಿದ್ದ ಪ್ರತಿಭಾ ಕಾರಂಜಿ ಮತ್ತು ಕಲ್ಲೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ಹಾಗೂ ಸ್ಪರ್ಧಾತ್ಮಕ ಮನೋಭಾವ, ಜ್ಞಾನ ವಿಕಸನಕ್ಕೆ ಪ್ರತಿಭಾ ಕಾರಂಜಿ ಸಹಕಾರಿ ಯಾಗಿದೆ.
ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಕೊಡುವ ಉದ್ದೇಶದಿಂದ ಪ್ರತಿ ವರ್ಷ ಪ್ರತಿಭಾ ಕಾರಂಜಿ ಆಯೋಜಿಸಲಾಗುತ್ತದೆ. ಈ ಕಾರ್ಯಕ್ರದಲ್ಲಿ ವಿದ್ಯಾರ್ಥಿಗಳು ಸೋಲು ಗೆಲುವು ಎನ್ನದೆ ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ. ಇಂತಹ ಕಾರ್ಯಕ್ರಮದಿಂದ ವೇದಿಕೆಯ ಭಯ ಹೋಗಲಾಡಿಸಲು, ನಾಯಕತ್ವದ ಗುಣ, ಧೈರ್ಯಬೆಳೆಸಿಕೊಳ್ಳಲು ಉತ್ತಮ ಅವಕಾಶವಾಗಿದೆ ಎಂದರುಸಿಆರ್ಪಿ ಗಂಗಾಧರ ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಹ ನೀಡಿದಾಗ ಮಕ್ಕಳ ಭವಿಷ್ಯಕ್ಕೆ ದಾರೀದೀಪವಾಗುತ್ತದೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಇಲ್ಲಿ ಮಕ್ಕಳು ವೈಯಕ್ತಿ ಮತ್ತು ಸಾಮೂಹಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಛದ್ಮವೇಷ ಸ್ಪರ್ಧೆಯಲ್ಲಿ ಶಾರದಾ ಶಾಲೆಯ 1ನೇ ತರಗತಿಯ ಲಕ್ಷಿತಾ ಇವರು ಆದಿಯೋಗಿ ಪಾತ್ರದಲ್ಲಿ ಗಮನ ಸೆಳೆದಳು. ಈ ಸಂದರ್ಭದಲ್ಲಿ ಉಪ ಪ್ರಾಚಾರ್ಯೆ ಸುಜಾತ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹನುಮಂತಪ್ಪ, ಇಸಿಒಗಳಾದ ರೇವಣ್ಣ, ಟಿ.ಎಂ.ಬಸವರಾಜ, ಎನ್ಪಿಎಸ್ ನೌಕರರ ಸಂಘದ ರಾಜ್ಯಾಧ್ಯಕ್ಷ ನಾಗನಗೌಡ ಎಂ.ಎ, ಸಿಆರ್ಪಿಗಳಾದ ಕರುಣಾಕರ, ರೇಣುಕಾರಾಧ್ಯ, ಸಹ ಶಿಕ್ಷಕರಾದ ಸುನಿತಾ, ರುದ್ರ್ಪ, ಬಸವರಾಜ, ರಾಜು, ಶಾಮ್ ಸುಂದರ್, ಮಂಜುನಾಥ ಸೆರಿದಂತೆ ಅನೇಕರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 