ಮಕ್ಕಳ ಭವಿಷ್ಯದ ಶಿಕ್ಷಣಕ್ಕೆ ಟ್ಯಾಲೆಂಟ್ ಹಂಟ್ ಪರೀಕ್ಷೆ: ಎಸ್. ಜಿ. ಪಾಟೀಲ್
Talent Hunt Exam for Children's Future Education: S. G. Patil
ಲೋಕದರ್ಶನ ವರದಿ
ಗದಗ 29: ಎಲ್ಲ ಮಕ್ಕಳಲ್ಲೂ ಒಂದಲ್ಲ ಒಂದು ಪ್ರತಿಭೆ ಇರುತ್ತದೆ. ಆದರೆ ಅವರಲ್ಲಿನ ಪ್ರತಿಭೆ ಗುರುತಿಸಿ, ಅದಕ್ಕೆ ಪೂರಕವಾಗಿ ಮಕ್ಕಳನ್ನು ಬೆಳಿಸಿದಾಗ ಮಾತ್ರ ಆ ಮಗು ಅದ್ಭುತ ಸಾಧನೆಯನ್ನು ಸಾಧಿಸಲು ಸಾಧ್ಯ. ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆ ಶೈಕ್ಷಣಿಕವಾಗಿ ಮಕ್ಕಳನ್ನು ಪ್ರೋತ್ಸಾಹಿಸುವ ಕಾರ್ಯ ಮಾಡುತ್ತಿದೆ ಎಂದು ಆದಿಯೋಗಿ ಏಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಶ್ರೀಕಾಂತ ಜಿ. ಪಾಟೀಲ್ ಹೇಳಿದರು.
ಅವರು ಆದಿಯೋಗಿ ಏಜುಕೇಷನಲ್ ಟ್ರಸ್ಟ್ ವತಿಯಿಂದ ನಗರದ ಮೈಲಾರ್ಪ ಮೆಣಸಗಿ ಪಿಯು ಕಾಲೇಜಿನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಏರಿ್ಡಸಿದ್ದ ಟ್ಯಾಲೆಂಟ್ ಹಂಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಜಿಲ್ಲೆಯ ಮಕ್ಕಳಿಗೆ ಶೈಕ್ಷಣಿಕವಾಗಿ ಪ್ರೋತ್ಸಾಹಿಸಲು ಅವರ ಭವಿಷ್ಯದ ಶಿಕ್ಷಣಕ್ಕೆ ಗಟ್ಟಿಯಾದ ಅಡಿಪಾಯ ಹಾಕಲು ನಮ್ಮ ಸಂಸ್ಥೆ ಟ್ಯಾಲೆಂಟ್ ಹಂಟ್ ಹೆಸರಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುತ್ತಿದೆ, ಪರೀಕ್ಷೆಯಲ್ಲಿ ವಿಜೇತರಾದವರಿಗೆ ನಗದು ಬಹುಮಾನ ನೀಡಿ,ಪ್ರೋತ್ಸಾಹಿಸುವ ಕಾರ್ಯ ಮಾಡಲಾಗುತ್ತಿದೆ. ಇಂತಹ ಪರೀಕ್ಷೆ ಮೂಲಕ ಮಕ್ಕಳನ್ನು ಈ ಸ್ಪರ್ಧಾತ್ಮಕ ಯುಗಕ್ಕೆ ಅಣಿಗೊಳಿಸುವ ಪ್ರಯತ್ನ ನಮ್ಮದಾಗಿದೆ ಎಂದರು.
ಪರೀಕ್ಷೆಯಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಟ್ರಸ್ಟ್ ಕಾರ್ಯದರ್ಶಿ ಪವನಕುಮಾರ್ ಶೇಠ ಹಾಗೂ ಖಜಾಂಚಿ ಕುಮಾರ್ ರಾಥೋಡ್ ಟ್ಯಾಲೆಂಟ್ ಹಂಟ್ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಅಭಿನಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 