ಸೆ, 14 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
Talent award ceremony on September 14th
ಜಮಖಂಡಿ 22: ನಗರದಲ್ಲಿ ವೀರಶೈವ ಪಂಚಮಸಾಲಿ ಸಂಘ ಹಾಗೂ ರಾಣಿ ಚೆನ್ನಮ್ಮ ಸೊಸೈಟಿಯ ಸಹಯೋಗದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸೆ, 14 ರಂದು ಮುಂಜಾನೆ 10 ಗಂಟೆಗೆ ಮೈಗೂರ ರಸ್ತೆಯ ಪಂಚಮಸಾಲಿ ಕಲ್ಯಾಣ ಮಂಟಪದಲ್ಲಿ ಜರುಗಲಿದೆ ಎಂದು ಪಂಚಮಸಾಲಿ ಅಧ್ಯಕ್ಷ ಪಿ,ಎನ್,ಪಾಟೀಲ ಹೇಳಿದರು.
ನಗರದ ರಾಣಿ ಚನ್ನಮ್ಮ ಸೊಸೈಟಿಯಲ್ಲಿ ವೀರಶೈವ ಪಂಚಮಸಾಲಿ ಸಮಾಜದಿಂದ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು. ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ ಶೇಕಡಾ 85 ರಷ್ಟು ಹೆಚ್ಚು ಅಂಕ ಪಡೆದ ಮಕ್ಕಳಿಗೆ ಪ್ರಥಮ ಸ್ಥಾನ ಬಹುಮಾನ 15 ಸಾವಿರ, ದ್ವಿತೀಯ ಬಹುಮಾನ 10 ಸಾವಿರ, ತೃತೀಯ ಬಹುಮಾನ 5 ಸಾವಿರ ರೂಪಾಯಿಗಳನ್ನು ನಗದು ಹಣವನ್ನು ನೀಡುವ ಜೊತೆಗೆ ಅವರ ವಿದ್ಯಾಭ್ಯಾಸಕ್ಕೆ ಅನುಕೂಲವಾಗುತ್ತದೆ. ಸೆ,6 ರ ಒಳಗಾಗಿ ಎಲ್ಲ ಮಕ್ಕಳು ತಮ್ಮ ಮೂಲ ದಾಖಲಾತಿಯಾದ ಅಂಕಪಟ್ಟಿ, ಆಧಾರ ಕಾರ್ಡ, ಪೋಟೋ ಹೀಗೆ ತಮ್ಮ ದಾಖಲಾತಿಗಳನ್ನು ಕೊಟ್ಟು ಹೆಸರು ನೊಂದಾಯಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಪ್ರಭು ಜನವಾಡ, ಅಪಾಸಾಬ ಚೌಗಲಾ, ಮಾಂತೇಶ ನರಸನಗೌಡ, ಆರ್.ಎಸ್.ಬಿರಾದರ, ಬಸು ಬಳಗಾರ, ಪಂಡಿತಪ್ಪ ಜುಲ್ಪಿ, ಕಾಡು ಗಡಾದ, ಈಶ್ವರ ನ್ಯಾಮಗೌಡ, ಮ್ಯಾನೇಜರ್ ಸಂಗು ಐನಾಪೂರ, ಚಂದ್ರಶೇಖರ ಆಲೂರ ಸುದ್ದಿಗೋಷ್ಠಿಯಲ್ಲಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 