ಮಂಗಳವಾರದಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
Talent award ceremony on Tuesday- Nesaragi News
ನೇಸರಗಿ 01: ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಗಜಾನನ ಕಮೀಟಿ, ನೇಸರಗಿ ಹಾಗೂ ಗೆಳೆಯರ ಬಳಗ ನೇಸರಗಿ ಇವರ ಸಹಯೋಗದಲ್ಲಿ ಮಂಗಳವಾರ ದಿ. 2ರಂದು ಸಾಯಂಕಾಲ 6 ಗಂಟೆಗೆ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈಗಾಗಲೇ ಸ್ಪರ್ಧಾಳುಗಳು ತಮ್ಮ ತಮ್ಮ ಶಿಕ್ಷಣ ಸಂಸ್ಥೆಗಳಿಂದ ಹೆಸರುಗಳನ್ನು ನೊಂದಾಯಿಸಿರುತ್ತಾರೆ. ವಿಜೇತರಿಗೆ ಕೊಡಮಾಡುವ ನೆನಪಿನ ಕಾಣಿಕೆಗಳನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ವೀರಭದ್ರ ಬ ಚೋಬಾರಿಯವರು ವಿತರಣೆ ಮಾಡಲಿದ್ದಾರೆ. ಪ್ರಶಸ್ತಿ ಪತ್ರಗಳನ್ನು ಮಹಾಂತೇಶ ವೀ ಕಟ್ಟಿಮನಿಯವರು ನೀಡಲಿದ್ದಾರೆ. ನೋಟ್ ಬುಕ್ ಮತ್ತು ಪೆನ್ನುಗಳನ್ನು ಭಾಗ್ಯವಂತಿ ಬುಕ್ ಸ್ಟಾಲನ ಮಾಲಿಕರಾದ ಅಡಿವೆಪ್ಪ ಕರವೀರನವರ ಹಾಗೂ ಪ್ರೇರಣಾದಾಯಕ ಪುಸ್ತಕಗಳನ್ನು ಮಹಮ್ಮದ್ ( ಪಪ್ಪು) ನದಾಫ - ಇವರುಗಳು ನೀಡಿರುತ್ತಾರೆ. ಗುರುಹಿರಿಯರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ಸಕಾಲಕ್ಕೆ ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂಬುದು ಸಂಘಟಕರು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 