ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ
Talent award for children who have achieved success in the field of education
ಕಂಪ್ಲಿ 08; ಸ್ಥಳೀಯ ನಿಮಿಚಾಂಬ ದೇವಸ್ಥಾನ ಆವರಣದಲ್ಲಿ ನಿಮಿಷಾಂಬ ದೇವಿಯ 39ನೇ ಜಯಂತ್ಯೋತ್ಸವ ನಿಮಿತ್ಯ ಸೋಮವಂಶ ಆರ್ಯ ಕ್ಷತ್ರಿಯ (ಚಿತ್ರಗಾರ)ಸಮಾಜದಿಂದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಬುಧವಾರ ಗೌರವಿಸಲಾಯಿತು.
ವೀರಶೈವ ಸಮಾಜದ ತಾಲೂಕು ಅಧ್ಯಕ್ಷ ಪಿ.ಮೂಕಯ್ಯಸ್ವಾಮಿ ಇವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಕೊಡಿಸುವಲ್ಲಿ ಪಾಲಕರು ಮುಂದಾಗಬೇಕು. ಇತ್ತೀಚಿನ ದಿನಮಾನದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವಿದ್ದು, ಈ ನಿಟ್ಟಿನಲ್ಲಿ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಸಮಾಜದವರು ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುವ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆ ನೀಡುವ ಜತೆಗೆ ಸಮಾಜ ಸೇವೆ ಮಾಡಿಕೊಂಡು ಬರುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು. ಸೋ.ಆ.ಕ್ಷ.ಸಮಾಜದ ಅಧ್ಯಕ್ಷ ಮಾರುತಿ ಚಿತ್ರಗಾರ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಇಲ್ಲಿನ ವೇದಿಕೆ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಸಂಜಾನ ಬುಸಾರೆ, ಸಿ.ಪೂಜಾ ಬುಸಾರೆ, ವರುಣ ಚಿತ್ರಗಾರ, ನಿಖಿಲ್, ಸಂಗೀತಾ, ಪ್ರವೀಣ್ ಕುಮಾರ ಇವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಇಲ್ಲಿನ ದೇವಸ್ಥಾನದಲ್ಲಿ ಗಾಯತ್ರಿ ಹೋಮ, ಪೂರ್ಣಾಹುತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ದೆಯಿಂದ ಜರುಗಿದವು. ಈ ಸಂದರ್ಭದಲ್ಲಿ ಸೋ.ಆ.ಕ್ಷ.ಸಮಾಜದ ಉಪಾಧ್ಯಕ್ಷ ನಾಗರಾಜ ಉಭಾಳೆ, ಕಾರ್ಯದರ್ಶಿ ಷಣ್ಮುಖಪ್ಪ ಚಿತ್ರಗಾರ, ಖಜಾಂಚಿ ಶಿವಾನಂದ ಉಭಾಳೆ, ಗೌರವಾಧ್ಯಕ್ಷರಾದ ಸುಬ್ರಮಣ್ಯ ಉಭಾಳೆ, ಕೃಷ್ಣಪ್ಪ, ಸದಸ್ಯ ವೆಂಕಟೇಶ ಚಿತ್ರಗಾರ, ಮುಖಂಡರಾದ ಡಿ..ರವಿ, ಎಸ್.ಎಸ್.ಮಾರುತಿ, ವೆಂಕಟೇಶ ಚಿತ್ರಗಾರ, ಬಿ.ರಾಜಣ್ಣ ಸೇರಿದಂತೆ ಸಮಾಜದವರು ಪಾಲ್ಗೊಂಡಿದ್ದರು.
ಸಂಜೆ ರಥೋತ್ಸವ ಸಂಭ್ರಮದಿಂದ ಜರುಗಿತು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 