ಪಂಚಮಸಾಲಿ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ: ಮೇಟಿ
ಲೋಕದರ್ಶನ ವರದಿ
ಕೊಪ್ಪಳ 16: ತಾಲೂಕಿನ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುವ ಕಾರ್ಯಕ್ರಮವನ್ನು ಜೂನ್ 30ರಂದು ಹಮ್ಮಿಕೊಳ್ಳಲಾಗಿದೆ. ಎಸ್ಎಸ್ಎಲ್ಸಿ ಯಲ್ಲಿ ಶೇ 80%, ಪಿಯುಸಿ ಯಲ್ಲಿ ಶೇ 75% ಅಂಕ ಪಡೆದ ಮಕ್ಕಳಿಂದ ಆರ್ಜಿ ಆಹ್ವಾನಿಸಲಿದ್ದು, ಎಸ್ಎಸ್ಎಲ್ ಅಥವಾ ಪಿಯುಸಿ ಅಂಕಪಟ್ಟಿ, ಆಧಾರ ಕಾರ್ಡ, 2 ಭಾವಚಿತ್ರಗಳ ನಿಗದಿತ ದಾಖಲೆಗಳೊಂದಿಗೆ ಜೂನ್ 25 ರ ಒಳಗಾಗಿ ತಹಶೀಲ ಕಛೇರಿ ಎದುರಿಗೆ ಇರುವ ವೀರರಾಣಿ ಕಿತ್ತೂರು ಚನ್ನಮ್ಮ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ, ಕೊಪ್ಪಳದಲ್ಲಿ ಅರ್ಜಿ ಯನ್ನು ಸಲ್ಲಿಸಿ ಸಮಾಜ ಬಾಂಧವರು ಪ್ರತಿಭಾ ಪುರಸ್ಕಾರದ ಸೌಲಭ್ಯವನ್ನು ಪಡೆದುಕೊಳ್ಳಬೇಕೆಂದು ತಾಲೂಕ ಅಧ್ಯಕ್ಷ ಕರಿಯಪ್ಪ ಮೇಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೋ: 9900362673, 9845581409, 9845716166, 9448634067, 9741263492 ಸಂಪರ್ಕಿಸಲು ಕೋರಲಾಗಿದೆ.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 