ಕದನವಿರಾಮ ಬೆನ್ನಲ್ಲೇ ತಾಲಿಬಾನ್ ಉಗ್ರರಿಂದ 100 ಮಂದಿ ಒತ್ತೆಯಾಳು
ಕಾಬೂಲ್: ಹೆಂಗಸರು, ಮಕ್ಕಳು ಸೇರಿದಂತೆ ಸುಮಾರು ನೂರು ಮಂದಿಯನ್ನು ತಾಲಿಬಾನ್ ಭಯೋತ್ಪಾದಕರು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿರುವ ಘಟನೆ ಅಫ್ಘಾನಿಸ್ತಾನದಲ್ಲಿ ಸೋಮವಾರ ನಡೆದಿದೆ.
ಈದ್ ಅಲ್ ಅಧಾ ರಜೆಯ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನ್ ಅಧ್ಯಕ್ಷ ಅಶ್ರಫ್ ಗನಿ ತಾಲಿಬಾನ್ ಉಗ್ರರ ವಿರುದ್ಧ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ ತಾಲಿಬಾನ್ ಉಗ್ರರು ಇದೀಗ ನೂರು ಮಂದಿಯನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿರುವ ಘಟನೆ ನಡೆದಿದೆ.
ಕದನ ವಿರಾಮವನ್ನು ಮುಖಂಡರು ಒಪ್ಪಿಕೊಂಡಿರುವುದಾಗಿ ತಾಲಿಬಾನ್ ಮೂಲಗಳು ತಿಳಿಸಿರುವುದಾಗಿ ರಾಯಟಸರ್್ ವರದಿ ಹೇಳಿದ್ದು, ಏತನ್ಮಧ್ಯೆ ಈ ಬಗ್ಗೆ ತಾಲಿಬಾನ್ ಮುಖ್ಯ ನಾಯಕ, ಉಗ್ರ ಶೇಕ್ ಹೈಬತುಲ್ಲಾನ ಅನುಮತಿಗಾಗಿ ಕಾಯಲಾಗುತ್ತಿದೆ ಎಂದು ವರದಿ ವಿವರಿಸಿದೆ.
ಷರತ್ತುಸಹಿತ ಕದನ ವಿರಾಮ ಇಂದಿನಿಂದ ಆರಂಭವಾಗಲಿದ್ದು, ಎಲ್ಲಿಯವರೆಗೆ ತಾಲಿಬಾನ್ ಇದನ್ನು ಗೌರವಿಸಿ ರಕ್ಷಿಸಿಕೊಳ್ಳುತ್ತದೆಯೋ ಅಲ್ಲಿಯವರೆಗೆ ಮುಂದುವರಿಯಲಿದೆ ಎಂದು ಗನಿ
ತಿಳಿಸಿದ್ದರು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 