ತಾಳಿಕೋಟೆ: ಖಾಸ್ಗತ ಶಿವಯೋಗಿ ಜಾತ್ರೋತ್ಸವ ಆನೆ ಅಂಬಾರಿ
ಲೋಕದರ್ಶನ ವರದಿ
ತಾಳಿಕೋಟೆ 15: ಖಾಸ್ಗತ ಶಿವಯೋಗಿಗಳ ಜಾತ್ರೋತ್ಸವ ನಿಮಿತ್ತ ಭಾನುವಾರ ಖಾಸ್ಗತ ಶ್ರೀಗಳ ಬೆಳ್ಳಿ ಮೂರ್ತಿಯನ್ನು ಆನೆ ಅಂಬಾರಿಯಲ್ಲಿ ಹಾಗೂ ಶ್ರೀಮಠದ ಸಿದ್ದಲಿಂಗ ಸ್ವಾಮೀಜಿ ಅವರನ್ನು ಅಶ್ವರಥದಲ್ಲಿ ಮೆರವಣಿಗೆ ಮಾಡಲಾಯಿತು.
ಬೆಳಗ್ಗೆ 8 ಗಂಟೆಗೆ ಆರಂಭವಾದ ಪಲ್ಲಕ್ಕಿ ಹಾಗೂ ರಥ ಕಲಶದ ಮಹಾ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಪುರಾತನ ಭೀಮನಬಾವಿಯಲ್ಲಿ 'ಓಂ ನಮಃ ಶಿವಾಯ' ಭಜನೆಯೊಂದಿಗೆ ಗಂಗಸ್ಥಳ ಕಾರ್ಯಕ್ರಮ ನಡೆದ ನಂತರ ಮಧ್ಯಾಹ್ನ 2.30 ಗಂಟೆಗೆ ಮೆರವಣಿಗೆ ಮರಳಿ ಮಠಕ್ಕೆ ತಲುಪಿತು.
ರಸ್ತೆಯುದ್ದಕ್ಕೂ ಸುಮಂಗಲೆಯರು ಮನೆ ಅಂಗಳದಲ್ಲಿ ರಂಗೋಲಿಯ ಚಿತ್ತಾರ ಹಾಗೂ ತಳಿರು ತೋರಣಗಳಿಂದ ಸಿಂಗರಿಸಿದ್ದರು. ಗೊಂಬೆ ಕುಣಿತ, ಕರಡಿ ಮಜಲು, ಸನಾದಿ ವಾದನ ಹಾಗೂ ಕಲಾ ತಂಡಗಳು ಸೇರಿ ವಿವಿಧ ವಾದ್ಯ ವೈಭವಗಳು ಮೆರವಣಿಗೆ ಮೆರಗು ತಂದವು.
ರಾಜವಾಡೆ ಕಿಂಗ್ಸ್, ಭಗತ್ಸಿಂಗ್ ಹಾಗೂ ರಾಮಸಿಂಗ್ ಗೆಳೆಯರ ಬಳಗ, ಭಾರತ ವಿಕಾಸ ಪರಿಷತ್, ವಿರಕ್ತೇಶ್ವರ ತರುಣ ಸಂಘ, ನಮ್ಮ ಗೆಳೆಯರ ಬಳಗ, ಸಜ್ಜನ ಸಮಾಜ ಬಾಂಧವರು ಹಾಗೂ ಅನೇಕ ಯುವಕ ಸಂಘದವರು ದಾರಿಯುದ್ದಕ್ಕೂ ಪ್ರಸಾದ ಸೇವೆ ಹಾಗೂ ತಂಪು ಪಾನಿಯ, ಕುಡಿಯುವ ನೀರಿನ ವ್ಯವಸ್ಥೆ ಏರ್ಪಡಿಸಿದ್ದರು.
ಖಾಸ್ಗತೇಶ್ವರ ಮಠದ ಉಸ್ತುವಾರಿ ಮುರುಗೇಶ ವಿರಕ್ತಮಠ, ಸಂಗಯ್ಯ ವಿರಕ್ತಮಠ, ವಿಶ್ವನಾಥ ವಿರಕ್ತಮಠ, ಶರಭಯ್ಯ ಪುರಾಣಿಕಮಠ, ಮುರುಗನವರ ಶಿರೂರ, ಶ್ರೀಧರ ಕಾಗನೂರಮಠ ಇತರರು ಇದ್ದರು. ಸಿಪಿಐ ರವಿಕುಮಾರ ಕಪ್ಪತ್ತನವರ, ಪಿಎಸ್ಐ ಗೋವಿಂದೆಗೌಡ ಪಾಟೀಲ ಹಾಗೂ ಪೊಲೀಸ್ ಸಿಬ್ಬಂದಿ ಸೂಕ್ತ ಭದ್ರತೆ ಒದಗಿಸಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 