ತಾಲ್ಲೂಕು ಪಂಚಾಯ್ತಿ ಸಾಮಾನ್ಯ ಸಭೆ
ಕೂಡ್ಲಿಗಿ: ಪಟ್ಟಣದ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಗುರುವಾರ ನಡೆಯಬೇಕಿದ್ದ ತಾಲ್ಲೂಕು ಪಂಚಾಯ್ತಿ ಸಾಮಾನ್ಯ ಸಭೆ ಸದಸ್ಯರ ಕೋರಂ ಕೊರತೆಯಿಂದ ಮುಂದೂಡಲ್ಪಟ್ಟಿತು.
ಬೆಳಿಗ್ಗೆ 11ಗಂಟೆಗೆ ಆರಂಭವಾಗಬೇಕಾಗಿದ್ದ ಸಭೆಯಲ್ಲಿ ಪಾಲ್ಗೊಳ್ಳಲು ಎಲ್ಲ ಇಲಾಖೆಗಳ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಬಂದು ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಸದಸ್ಯರುಗಳ ಬರುವಿಕೆಗಾಗಿ ಗಂಟೆಗೂ ಹೆಚ್ಚುಕಾಲ ಕಾದು ಕುಳಿತಿದ್ದರು. ಆದರೆ ಅಧ್ಯಕ್ಷ ಸೇರಿದಂತೆ ಕೇವಲ 11 ಜನ ಸದಸ್ಯರು ಮಾತ್ರ ಬಂದಿದ್ದರು. ಶಾಸಕರು, ಸಂಸದರು ಸೇರಿದಂತೆ ಸಭೆಯಲ್ಲಿ ಒಟ್ಟು 19 ಜನ ಸದಸ್ಯರು ಇರಬೇಕಾಗಿತ್ತು.
ಆದರೆ ಅಧ್ಯಕ್ಷ ಬಿ. ವೆಂಕಟೇಶ್ ನಾಯ್ಕ್ ಸೇರಿದಂತೆ 11 ಜನ ಸದಸ್ಯರು ಮಾತ್ರ ಸಭೆಗೆ ಹಾಜರಾಗಿದ್ದರು.ಉಪಾಧ್ಯಕ್ಷೆ ಹಾಲಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜ ಸೇರಿದಂತೆ 15 ಜನ ತಾಲ್ಲೂಕು ಪಂಚಾಯ್ತಿ ಸದಸ್ಯರು ಗೈರಾಗಿದ್ದರು.
ಇದರಿಂದ ಕೋರಂ ಕೊರೆತೆಯಾಗಿದ್ದು, ಸಭೆಯನ್ನು ಅನಿರ್ಧಿಷ್ಟ ಕಾಲ ಮುಂದೂಡಲಾಗಿದೆ ಎಂದು ಘೋಷಣೆ ಮಾಡಿದ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಜಿ.ಎಂ. ಬಸಣ್ಣ, ಮುಂದಿನ ಸಭೆಯ ದಿನಾಂಕವನ್ನು ತಿಳಿಸಲಾಗುವುದು ಎಂದು ಹೇಳಿದರು.
ಈ ಮಧ್ಯ ಮಾತನಾಡಿದ ಸದಸ್ಯ ಡಿ. ಕೊಟ್ರೇಶ್, 'ಸದಸ್ಯರು ಹೇಳಿದ ಯಾವ ಕೆಲಸವೂ ಅಗುತ್ತಿಲ್ಲ ಎಂದ ಮೇಲೆ ಸದಸ್ಯರು ಸಭೆಗೆ ಬಂದು ಏನು ಪ್ರಯೋಜನ. ಅದ್ದರಿಂದ ಬಹುತೇಕ ಸದಸ್ಯರು ಸಭೆಯಿಂದ ದೂರ ಉಳಿದಿದ್ದಾರೆ' ಎಂದು ಹೇಳಿ ಸಭೆಯಿಂದ ಹೊರ ನಡೆದರು.
ಒಟ್ಟಿನಲ್ಲಿ ಸದಸ್ಯರಲ್ಲಿನ ಸಾಮರಸ್ಯದ ಕೊರತೆಯಿಂದ ತಾಲ್ಲೂಕಿನ ಎಲ್ಲ ಇಲಾಖೆಗಳ ಅಧಿಕಾರಿಗಳ ಅಮೂಲ್ಯವಾದ ಸಮಯ ಬಲಿಯಾದಂತಾಗಿದೆ. ತಾಲ್ಲೂಕಿನಲ್ಲಿ ಮಳೆಯ ಅಭಾವವಿದೆ. ಮಳೆಗಾಲದಲ್ಲಿಯೇ ಜನಗಳಿಗೆ ಕುಡಿಯಲು ನೀರು, ಜಾನುವಾರುಗಳಿಗೆ ಮೇವಿನ ಅಭಾವ ಸೇರಿದಂತೆ ಅನೇಕ ಸಮಸ್ಯೆಗಳನ್ನು ಚರ್ಚಿಸಿ ಅಧಿಕಾರಿಗಳಿಂದ ಕೆಲಸ ಮಾಡಿಸಬೇಕಾಗಿದ್ದ ಜನ ಪ್ರತಿನಿಧಿಗಳು ಸಭೆಯಿಂದ ದೂರ ಉಳಿದಿದ್ದು ಎಷ್ಟು ಸರಿ ಎಂದು ಸಭಾಂಗಣದ ಹೊರಗೆ ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 