ತಾಲೂಕಾಡಳಿತದಿಂದ ಭಗವಾನ್ ಬುದ್ಧರ ಜಯಂತಿ ಆಚರಣೆ
Taluk administration celebrates Lord Buddha's Jayanti
ತಾಳಿಕೋಟಿ 13: ಪಟ್ಟಣದ ತಹಸಿಲ್ದಾರ್ ಕಾರ್ಯಾಲಯ ಸಭಾಂಗಣದಲ್ಲಿ ಭಗವಾನ್ ಬುದ್ಧರ 2588 ನೇ ಜಯಂತಿಯನ್ನು ಸೋಮವಾರ ಆಚರಿಸಲಾಯಿತು.
ಜಯಂತಿ ಅಂಗವಾಗಿ ಭಗವಾನ್ ಬುದ್ಧರ ಭಾವಚಿತ್ರಕ್ಕೆ ಬೌದ್ಧ ಧರ್ಮದ ವಿಧಿ ವಿಧಾನಗಳೊಂದಿಗೆ ಪೂಜೆಯನ್ನು ಮುಖಂಡ ಬಸವರಾಜ ಕಟ್ಟಿಮನಿ ನೆರವೇರಿಸಿ ಕೊಟ್ಟರು. ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಜೈ ಭೀಮ ಮುತ್ತಗಿ ಹಾಗೂ ಮಹೇಶ ಚಲವಾದಿ ಅವರು ಭಗವಾನ್ ಬುದ್ಧರ ಜೀವನ ಸಂದೇಶದ ಕುರಿತು ಮಾತನಾಡಿದರು. ತಹಸಿಲ್ದಾರ್ ಡಾ.ವಿನಯಾ ಹೂಗಾರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಿ.ಆರಿ್ಸ. ರಾಜು ವಿಜಾಪುರ ನಿರೂಪಿಸಿದರು.
ಈ ಸಮಯದಲ್ಲಿ ಗಣ್ಯರಾದ ಬಿ.ಬಿ. ಕಟ್ಟಿಮನಿ,ಜಿ.ಜಿ.ಮದರಕಲ್ಲ, ದೇವೇಂದ್ರ ಹಾದಿಮನಿ, ನಾಗೇಶ ಎಂ. ಕಟ್ಟಿಮನಿ,ಸಾಮಾಜಿಕ ಕಾರ್ಯಕರ್ತ ಅಬೂಬಕರ ಲಾಹೊರಿ, ಗೋಪಾಲ ಕಟ್ಟಿಮನಿ, ಮಶಾಕ್ ಜಮಾದಾರ, ಅಲ್ತಾಫ್ ಬಿಜಾಪುರ,ತಾಪಂ ನ ಮಹಾಂತಗೌಡ ದೊರೆಗೋಳ, ಸಿರಸ್ತೆದಾರ ಜೆ.ಆರ್.ಜೈನಾಪೂರ, ಮುಖ್ಯ ಶಿಕ್ಷಕಿ ಆರಿ್ಬ.ಆಲೂರ, ಪುರಸಭೆ, ಕಂದಾಯ,ಶಿಕ್ಷಣ ಇಲಾಖೆ ಹಾಗೂ ಹೆಸ್ಕಾಂ ಅಧಿಕಾರಿಗಳು ಮತ್ತು ಸಮಾಜದ ಗಣ್ಯರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 