ತಾಲೂಕು ಆಡಳಿತದಿಂದ ಯೋಗಿ ನಾರೇಯಣ ಯತೀಂದ್ರರ ಜಯಂತಿ
Taluk administration celebrates Yogi Narayan Yathindra's birth anniversary
ಹುಬ್ಬಳ್ಳಿ ಮಾ.3: ಇಂದು ತಾಲೂಕು ಆಡಳಿತಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ಕಂದಾಯ ಇಲಾಖೆ ಮತ್ತು ತಾಲೂಕು ಆಡಳಿತದಿಂದ ಯೋಗಿ ನಾರೇಯಣ ಯತೀಂದ್ರರ ( ಕೈವಾರ ತಾತಯ್ಯ) ಜಯಂತೋತ್ಸವವನ್ನು ಆಚರಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಮಹೇಶ ಭಗವಂತ ಗಸ್ತೆ ಅವರು ಯೋಗಿ ನಾರೇಯಣ ಯತೀಂದ್ರರ ( ಕೈವಾರ ತಾತಯ್ಯ)ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಈ ಸಂದರ್ಭದಲ್ಲಿ ಸಮಾಜದ ಮುಖಂಡರಿಗೆ ಸನ್ಮಾನ ಮಾಡಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಹುಬ್ಬಳ್ಳಿಯ ರುದ್ರಾಕ್ಷಿಮಠದ ಬಸವಲಿಂಗ ಸ್ವಾಮೀಜಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಗ್ರೇಡ್ 2 ತಹಶೀಲ್ದಾರ ಸಿ.ಎಸ್.ಕುಲಕರ್ಣಿ, ಸಮಾಜದ ಮುಖಂಡರಾದ ವೆಂಕಟೇಶ ಮುತ್ತಗಾರ, ಶಶಿಕಾಂತ ಬೀಜವಾಡ, ಅಟಲ್ ಭಾಷಾ ಮುದ್ದಿನಮನಿ, ಎನ್.ಎನ್. ಕರನೆದ್ದಿ, ಚನ್ನಪ್ಪ ತರ್ಲಘಟ್ಟ, ಸಾಯಿನಾಥ್ ರಾಚೋಟಿ, ನಿಂಗಪ್ಪ ಬಡಿಗೇರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಇತರರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 