ರಾಯಬಾಗ: ತಾಲೂಕಾ ಮಟ್ಟದ ಜಾಗೃತಿ- ಶಿಕ್ಷಣ ಕಾರ್ಯಕ್ರಮ
ಲೋಕದರ್ಶನ ವರದಿ
ರಾಯಬಾಗ 27: ಪಟ್ಟಣದ ಮಹಾವೀರ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆ ಸಭಾಭವನದಲ್ಲಿ ದಿ.22ರಂದು ಡಾ.ಬಿ.ಆರ್.ಅಂಬೇಡ್ಕರ ಸಾಂಸ್ಕೃತಿಕ ಕಲಾ ಸಂಘ, ಅಲಖನೂರ, ನೆಹರು ಯುವ ಕೇಂದ್ರ ಬೆಳಗಾವಿ ಹಾಗೂ ಲಕ್ಷ್ಮೀಸೇನ ಸಂಸ್ಥೆಯ ಮಹಾವೀರ ಖಾಸಗಿ ಕೈಗಾರಕಾ ತರಬೇತಿ ಸಂಸ್ಥೆ ರಾಯಬಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕಾ ಮಟ್ಟದ ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮ ಜರುಗಿತು.
ಅತಿಥಿಗಳಾಗಿ ಆಗಮಿಸಿದ್ದ ಹಿರಿಯ ಸಮಾಲೋಚಕ ವೈ.ಆರ್.ಕಾಂಬಳೆ ಅವರು, ಬ್ಯಾಂಕಿನ ಸೌಲಭ್ಯ ಹಾಗೂ ಯೋಜನೆಗಳ ಕುರಿತು ವಿವರಿಸಿದರು. ಲಕ್ಷ್ಮೀಸೇನ ಸಂಸ್ಥೆಯ ಅಧ್ಯಕ್ಷ ಡಿ.ಎಮ್.ಶೆಟ್ಟಿ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು.
ಬೆಳಗಾವಿ ನೆಹರು ಯುವ ಕೇಂದ್ರದ ಲೆಕ್ಕಾಧಿಕಾರಿ ಆರ್.ಆರ್.ಮುತಾಲಿಕ ದೇಸಾಯಿ, ಮಹಾವೀರ ಖಾಸಗಿ ಕೈಗಾರಿಕಾ ತರಬೇತಿ ಕೇಂದ್ರದ ಪ್ರಾಚಾರ್ಯ ಟಿ.ವ್ಹಿ.ಕೇಶನೂರ, ಡಾ.ಎಸ್.ಎಸ್.ಪಾಟೀಲ, ಎಮ್.ಎಲ್.ಶಿಂಗೆ, ವಿಠ್ಠಲ ಜೋಡಟ್ಟಿ ಸೇರಿದಂತೆ ವಿದ್ಯಾಥರ್ಿಗಳು ಉಪಸ್ಥಿತರಿದ್ದರು.
ಸರಸ್ವತಿ ದೇವರುಸಿ ಸ್ವಾಗತಿಸಿದರು, ಯಲ್ಲಪ್ಪ ಮಾದರ ನಿರೂಪಿಸಿ, ವಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 