ಐಟಿ ಅಧಿಕಾರಿಗಳಿಂದ ಚೆನ್ನೈನಲ್ಲಿ ತಮಿಳು ನಾಯಕ ನಟ ವಿಜಯ್ ತೀವ್ರ ವಿಚಾರಣೆ
ಚೆನ್ನೈ, ಫೆ ೫ : ತಮಿಳು ಚಿತ್ರ ನಿರ್ಮಾಣ ಸಂಸ್ಥೆಯೊಂದರ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಅಧಿಕಾರಿಗಳು ಬುಧವಾರ ತಮಿಳು ಚಿತ್ರರಂಗದ ನಾಯಕ ನಟ ವಿಜಯ್ ಅವರನ್ನು ಪ್ರಶ್ನೆಗೊಳಪಡಿಸಿದ್ದರು.
ಚಿತ್ರವೊಂದರ ಚಿತ್ರೀಕರಣ ಸಮಯದಲ್ಲಿ ಸುಮಾರು ಐದು ಗಂಟೆಗಳ ಕಾಲ ವಿಜಯ್ ಅವರನ್ನು ಪ್ರಶ್ನಿಸಿದ ನಂತರ ಐಟಿ ಅಧಿಕಾರಿಗಳು ವಿಜಯ್ ಅವರ ನಿವಾಸದಲ್ಲೂ ವಿಚಾರಣೆ ಮುಂದುವರಿಸಿದ್ದಾರೆ ಎಂದು ಮೂಲಗಳು ಹೇಳಿವೆ
ಎಜಿಎಸ್ ಸಿನಿಮಾಸ್ ಸಂಸ್ಥೆ ಕಚೇರಿ. ಆಸ್ತಿಗಳ ಜತೆಗೆ ಸಿನಿಮಾ ಫೈನಾನ್ಷಿಯರ್ ಅನ್ಬು ಚೆಲಿಯನ್ ಅವರ ಮಧುರೈ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿಜಯ್ ನಾಯಕರಾಗಿ ನಟಿಸಿದ್ದ ಬಿಜಿಲ್ ಸಿನಿಮಾವನ್ನು ಕಳೆದ ವರ್ಷ ಎಜಿಎಸ್ ಸಿನೆಮಾಸ್ ನಿರ್ಮಿಸಿತ್ತು.
ಕಳೆದ ವರ್ಷ ಅಕ್ಟೋಬರ್ನಲ್ಲಿ ವಿಜಯ್ ಅವರ ಮರ್ಸೆಲ್ ಚಿತ್ರದಲ್ಲಿ ಜಿಎಸ್ ಟಿ ಹಾಗೂ ನೋಟು ರದ್ದತಿ ವಿರುದ್ದವಾಗಿ ಸಂಭಾಷಣೆ ಇದ್ದ ಕಾರಣ, ತಮಿಳುನಾಡಿನ ಬಿಜೆಪಿ ಘಟಕ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಜಿಎಸ್ಟಿ ಮತ್ತು ಡಿಜಿಟಲ್ ಇಂಡಿಯಾ ಅಭಿಯಾನದ ಬಗ್ಗೆ ಕೆಟ್ಟ ಚಿತ್ರಣ ಮೂಡಿಸುವ ಚಲನಚಿತ್ರದಲ್ಲಿನ ಕೆಲವು ಸಂಭಾಷಣೆಗಳನ್ನು ತೆಗೆದು ಹಾಕಬೇಕೆಂದು ಬಿಜೆಪಿ ಒತ್ತಾಯಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 