ಐಟಿ ಅಧಿಕಾರಿಗಳಿಂದ ಚೆನ್ನೈನಲ್ಲಿ ತಮಿಳು ನಾಯಕ ನಟ ವಿಜಯ್ ತೀವ್ರ ವಿಚಾರಣೆ
ಚೆನ್ನೈ, ಫೆ ೫ : ತಮಿಳು ಚಿತ್ರ ನಿರ್ಮಾಣ ಸಂಸ್ಥೆಯೊಂದರ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಅಧಿಕಾರಿಗಳು ಬುಧವಾರ ತಮಿಳು ಚಿತ್ರರಂಗದ ನಾಯಕ ನಟ ವಿಜಯ್ ಅವರನ್ನು ಪ್ರಶ್ನೆಗೊಳಪಡಿಸಿದ್ದರು.
ಚಿತ್ರವೊಂದರ ಚಿತ್ರೀಕರಣ ಸಮಯದಲ್ಲಿ ಸುಮಾರು ಐದು ಗಂಟೆಗಳ ಕಾಲ ವಿಜಯ್ ಅವರನ್ನು ಪ್ರಶ್ನಿಸಿದ ನಂತರ ಐಟಿ ಅಧಿಕಾರಿಗಳು ವಿಜಯ್ ಅವರ ನಿವಾಸದಲ್ಲೂ ವಿಚಾರಣೆ ಮುಂದುವರಿಸಿದ್ದಾರೆ ಎಂದು ಮೂಲಗಳು ಹೇಳಿವೆ
ಎಜಿಎಸ್ ಸಿನಿಮಾಸ್ ಸಂಸ್ಥೆ ಕಚೇರಿ. ಆಸ್ತಿಗಳ ಜತೆಗೆ ಸಿನಿಮಾ ಫೈನಾನ್ಷಿಯರ್ ಅನ್ಬು ಚೆಲಿಯನ್ ಅವರ ಮಧುರೈ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿಜಯ್ ನಾಯಕರಾಗಿ ನಟಿಸಿದ್ದ ಬಿಜಿಲ್ ಸಿನಿಮಾವನ್ನು ಕಳೆದ ವರ್ಷ ಎಜಿಎಸ್ ಸಿನೆಮಾಸ್ ನಿರ್ಮಿಸಿತ್ತು.
ಕಳೆದ ವರ್ಷ ಅಕ್ಟೋಬರ್ನಲ್ಲಿ ವಿಜಯ್ ಅವರ ಮರ್ಸೆಲ್ ಚಿತ್ರದಲ್ಲಿ ಜಿಎಸ್ ಟಿ ಹಾಗೂ ನೋಟು ರದ್ದತಿ ವಿರುದ್ದವಾಗಿ ಸಂಭಾಷಣೆ ಇದ್ದ ಕಾರಣ, ತಮಿಳುನಾಡಿನ ಬಿಜೆಪಿ ಘಟಕ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಜಿಎಸ್ಟಿ ಮತ್ತು ಡಿಜಿಟಲ್ ಇಂಡಿಯಾ ಅಭಿಯಾನದ ಬಗ್ಗೆ ಕೆಟ್ಟ ಚಿತ್ರಣ ಮೂಡಿಸುವ ಚಲನಚಿತ್ರದಲ್ಲಿನ ಕೆಲವು ಸಂಭಾಷಣೆಗಳನ್ನು ತೆಗೆದು ಹಾಕಬೇಕೆಂದು ಬಿಜೆಪಿ ಒತ್ತಾಯಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 