ಆದಿಲ್ ಶಾಹಿ ಕಾಲದ ಅನುವಾದ ಸಾಹಿತ್ಯದ ಸಂಪುಟ ತನ್ವಿರ್ ಹಾಸ್ಮಿಗೆ
Tanvir Hashmi to receive a volume of translated literature from the Adil Shahi period
ವಿಜಯಪುರ 25: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನ ಕೇಂದ್ರ ಪ್ರಕಟಿಸಿರುವ ಆದಿಲ್ ಶಾಹಿ ಕಾಲದ ಅನುವಾದ ಸಾಹಿತ್ಯದ ಸಂಪುಟಗಳನ್ನು ಸಚಿವ ಎಂ.ಬಿ.ಪಾಟೀಲರ ಸೂಚನೆ ಹಿನ್ನೆಲೆಯಲ್ಲಿ ಇಂದು ನಗರದ ಹಾಸಿಂ ಪೀರ ದರ್ಗಾದ ಶ್ರೀ ಸೈಯ್ಯದ ಮೊಹಮ್ಮದ ತನ್ವಿರ್ ಹಾಸ್ಮಿ ಅವರಿಗೆ ನೀಡಲಾಯಿತು.
ಸಚಿವ ಎಂ ಬಿ ಪಾಟೀಲ ಅವರು ಆದಿಲ್ ಶಾಹಿ ಕಾಲದ ಉರ್ದು, ದಖನಿ, ಪರ್ಶಿಯನ್ ಹಾಗೂ ಅರೆಬಿಕ್ ಸಾಹಿತ್ಯವನ್ನು ಹಳಕಟ್ಟಿ ಸಂಶೋಧನ ಕೇಂದ್ರದ ಮೂಲಕ ಕನ್ನಡ ಭಾಷೆಗೆ ಅನುವಾದಿಸಿದ್ದು, ಈ ಸಂಪುಟಗಳನ್ನು ಸಂಶೋಧನ ಕೇಂದ್ರದ ಸಂಯೋಜಕ ಡಾ. ವಿ. ಡಿ. ಐಹೊಳ್ಳಿ ಅವರು ಇಂದು ಶುಕ್ರವಾರ ಸೈಯ್ಯದ ಮೊಹಮ್ಮದ ತನ್ವೀರ್ ಹಾಸ್ಮಿ ಅವರಿಗೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಸೈಯ್ಯದ ಮೊಹಮ್ಮದ ತನ್ವಿರ್ ಹಾಸ್ಮಿ, ಸಚಿವ ಎಂ. ಬಿ. ಪಾಟೀಲ ಅವರು ಅನುವಾದ ಸಾಹಿತ್ಯ ಪ್ರಕಟಿಸುವ ಮೂಲಕ ಗತಕಾಲದ ಇತಿಹಾಸವನ್ನು ಇಂದಿನ ಯುವ ಜನತೆ ಅಧ್ಯಯನ ಮಾಡಲು ನೆರವಾಗಿದ್ದಾರೆ.
ಸಚಿವರ ಈ ಕಾರ್ಯ ಶ್ಲಾಘನೀಯವಾಗಿದ್ದು, ಭಾತೃತ್ವದ ಪ್ರತೀಕವಾಗಿದೆ. ಸರ್ವಜನರ ಏಳಿಗಾಗಿ ಶ್ರಮಿಸುತ್ತಿರುವ ಅವರಿಗೆ ಶುಭ ಹಾರೈಸುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ಬಂದೆನವಾಜ್ ಸುತಾರ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 