ಆರೋಪಿಗಳ ಗುರುತು ಪತ್ತೆಗಾಗಿ ಮೈಸೂರಿಗೆ ಶಾಸಕ ತನ್ವೀರ್ ಸೇಠ್
ಮೈ ಸೂರು, ಜ 9 ಶಾಸಕ ತನ್ವೀರ್ ಸೇಠ್ ಇಂದು ಮೈಸೂರಿಗೆ ವಾಪಸ್ಸಾಗಲಿದ್ದಾರೆ.ತನ್ವೀರ್ ಅವರ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗುರುತು ಪತ್ತೆ ಹಚ್ಚಲು ಶಾಸಕರು ಮೈಸೂರಿಗೆ ತೆರಳಲಿದ್ದಾರೆ.ಆರೋಪಿ ಫರ್ಹಾನ್ ಪಾಷಾ ಗುರುತು ಹಿಡಿಯಲು ತನ್ವೀರ್ ಆಗಮಿಸಿದ್ದು, ಇಂದು ಮೈಸೂರು ಜೈಲಿನಲ್ಲಿ ಆರೋಪಿ ಗುರುತು ಪತ್ತೆ ಹಚ್ಚಲಿದ್ದಾರೆ.ಶಾಸಕರ ಜತೆಗೆ 6 ಮಂದಿ ಪ್ರತ್ಯಕ್ಷದರ್ಶಿಗಳು ಹಾಗೂ ಇಬ್ಬರು ಪೊಲೀಸರು ಹಾಜರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.ಕಳೆದ ನವೆಂಬರ್ 18ರಂದು ನಡೆದ ಕಾರ್ಯಕ್ರಮವೊಂದರಲ್ಲಿ ಶಾಸಕ ತನ್ವೀರ್ ಸೇಠ್ ಮೇಲೆ ಕೊಲೆ ಯತ್ನ ನಡೆದಿತ್ತು. ಫರ್ಹಾನ್ ಪಾಷಾ ಚಾಕುವಿನಿಂದ ಕತ್ತಿನ ಭಾಗಕ್ಕೆ ಇರಿದಿದ್ದನು. ಈ ವೇಳೆ ಕುತ್ತಿಗೆ ಭಾಗಕ್ಕೆ ಪೆಟ್ಟು ಬಿದ್ದಿದ್ದು, ತಕ್ಷಣವೇ ಶಾಸಕರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ವೈದ್ಯರ ಸಲಹೆ ಮೇರೆಗೆ ವಿದೇಶದಲ್ಲಿ ಚಿಕಿತ್ಸೆ ಮುಂದುವರೆಸಿದ್ದರು. ಚಿಕಿತ್ಸೆ ಮುಕ್ತಾಯಗೊಂಡ ನಂತರ ದುಬೈನಲ್ಲೇ ಶಾಸಕರು ವಿಶ್ರಾಂತಿ ಪಡೆಯುತ್ತಿದ್ದರು. ಇದೀಗ ವಿಶ್ರಾಂತಿ ಮುಗಿಸಿ ಅವರು ವಿದೇಶದಿಂದ ಭಾರತಕ್ಕೆ ಮರಳಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 