ರಾಜ್ಯದಲ್ಲಿ ಈ ವರ್ಷ 120 ಸೇತುವೆ ನಿರ್ಮಾಣದ ಗುರಿ: ಸಚಿವ ಜಾರಕಿಹೊಳಿ
Target to build 120 bridges in the state this year: Minister Jarkiholi
ಕಾರವಾರ, ಫೆ.23 :- ರಾಜ್ಯದಲ್ಲಿ ಈ ವರ್ಷ ಹೊಸದಾಗಿ 120 ಸೇತುವೆಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು ಅವರು ಸೋಮವಾರ ಕುಮಟಾ ತಾಲ್ಲೂಕಿನ ಕಲಭಾಗದಲ್ಲಿ ಮೂವತ್ತು ಗುಂಡಿ ಸೇತುವೆ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು.
ಕರಾವಳಿ ಮತ್ತು ಮಲೆನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಗಾಲದ ಸಂದರ್ಭದಲ್ಲಿ ಒಂದು ಭಾಗದಿಂದ ಇನ್ನೊಂದು ಭಾಗದ ಸಂಪರ್ಕ ಕಡಿತವಾಗುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದ್ದು, ಈ ಸಮಸ್ಯೆಗೆ ಪರಿಹಾರ ಒದಗಿಸಲು ಈಗಾಗಲೇ 12 ಜಿಲ್ಲೆಗಳಲ್ಲಿ 400 ಕಾಲು ಸಂಕ ನಿರ್ಮಾಣ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಆದ್ಯತೆಯ ಮೇಲೆ ಹೆಚ್ಚಿನ ಸಂಖ್ಯೆಯ ಕಾಲ ಸಂಕಗಳನ್ನು ನಿರ್ಮಾಣ ಮಾಡಲಾಗುವುದು ಎಂದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿದ್ದಾಪುರ, ಕುಮಟಾ ಹೊನ್ನಾವರ ಭಾಗದಲ್ಲಿ ಹೆಚ್ಚಿನ ಕಾಲು ಸಂಕಗಳನ್ನು ನಿರ್ಮಾಣ ಮಾಡಲಾಗಿದ್ದು, ಅವಶ್ಯವಿರುವ ಕಡೆ ಕಾಲು ಸಂಕ ನಿರ್ಮಾಣ ಮಾಡಲು ಕ್ರಮಕೈಗೊಳ್ಳಲಾಗುವುದು. ಶಿಥಿಲಾವಸ್ಥೆಯಲ್ಲಿರುವ ಹಳೆ ಸೇತುವೆಗಳಿಗೆ ತಕ್ಷಣವೇ ಸೇತುವೆ ಮರು ನಿರ್ಮಾಣ ಮಾಡಲು ಮಂಜೂರಾತಿ ನೀಡುತ್ತಿದ್ದು, ಈ ಭಾಗದ ಜನರಿಗೆ ಅನುಕೂಲ ಮಾಡಿಕೊಡಲಾಗುವುದು. ನದಿಯ ಹಿನ್ನಿರಿಗೆ ಸಮುದ್ರದ ಉಪ್ಪು ನೀರು ಮಿಶ್ರಣವಾಗುವುದರಿಂದ ರೈತರು ಸಂಕಷ್ಟಕ್ಕೆ ಒಳಗಾಗುತ್ತಿದ್ದು, ಸೇತುವೆ ನಿರ್ಮಾಣದ ಸಂದರ್ಭದಲ್ಲಿ ಬ್ಯಾರೇಜ್ ನಿರ್ಮಾಣ ಮಾಡುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ ಎಂದರು.
ಶಾಸಕ ದಿನಕರ ಶೆಟ್ಟಿ ಮಾತನಾಡಿ, ಬಹಳ ವರ್ಷದಿಂದ ಈ ಸೇತುವೆ ಆಗಬೇಕು ಎಂಬುದು ಈ ಭಾಗದ ಜನತೆಯ ಕನಸಾಗಿತ್ತು. ಈ ಸೇತುವೆ ಬಗ್ಗೆ ಸೇತುವೆ ಅಗಲೀಕರಣಕ್ಕೆ ಸಚಿವರಲ್ಲಿ ಮನವಿ ಸಲ್ಲಿಸಿದ ತಕ್ಷಣ ಸ್ಪಂದಿಸಿ ಸೇತುವೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿ ಸೇತುವೆ ಮಾಡಲು ಮಂಜೂರಾತಿ ನೀಡಿದರು. 3 ಮೀಟರ್ ಇದ್ದ ಸೇತುವೆಯನ್ನು 9 ಮೀಟರ್ಗೆ ಅಗಲೀಕರಣ ಮಾಡಲಾಗುತ್ತಿದೆ. ಇದರ ಜೊತೆ ಬ್ರೀಡ್ಜ್ ಕಂ ಬ್ಯಾರೇಜ್ ನಿರ್ಮಾಣ ಮಾಡುವ ಮೂಲಕ ಉಪ್ಪು ನೀರು ರೈತರ ಗದ್ದೆಗೆ ಹೋಗದಂತೆ ತಡೆದು ರೈತರಿಗೆ ಅನುಕೂಲ ಮಾಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ನಾಯ್ಕ, ಮಾಜಿ ಶಾಸಕಿ ಶಾರದ ಶೆಟ್ಟಿ, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ದೀಲೀಪ್ ಶಶಿ, ಉಪ ವಿಭಾಗಾಧಿಕಾರಿ ಶ್ರವಣಕುಮಾರ್, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಮಲ್ಲಿಕಾರ್ಜುನ್ ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 