ಟಾಟಾ ಓಪನ್: ಸುಮಿತ್ ನಗಾಲ್ ಗೂ ವೈಲ್ಡ್ ಕಾರ್ಡ್
ಪುಣೆ, ಜ.29 : ದಕ್ಷಿಣ ಏಷ್ಯಾದ ಏಕೈಕ ಎಟಿವಿ ಟೂರ್ ಟೂರ್ನಿ ಟಾಟಾ ಓಪನ್ ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತದ ಇಬ್ಬರು ಆಟಗಾರರು ಸಿಂಗಲ್ಸ್ ಮುಖ್ಯ ಡ್ರಾದಲ್ಲಿ ನೇರ ಪ್ರವೇಶ ಪಡೆದಿದ್ದಾರೆ. ಫೆಬ್ರವರಿ 3 ರಿಂದ 9 ರವರೆಗೆ ಪುಣೆಯ ಮಹಲುಂಗಾ ಬಾಲೆವಾಡಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಾವಳಿಯ ಮೂರನೇ ಆವೃತ್ತಿಯಲ್ಲಿ ಪ್ರಜ್ನೇಶ್ ಗುನ್ನೇಶ್ವರನ್ ಅವರ ಹೊರತಾಗಿ ಸುಮಿತ್ ನಾಗಲ್ ಪುರುಷರ ಸಿಂಗಲ್ಸ್ನಲ್ಲಿ ಕಣಕ್ಕೆ ಈಳಿಯಲಿದ್ದಾರೆ.
ನಾಗಾಲ್ ಅವರಿಗೆ ಕಾಯ್ದಿರಿಸಿದ ಪಟ್ಟಿಯಲ್ಲಿ ಇರಿಸಲಾಗಿತ್ತು. ಈಗ ನಾಗಲ್ ಅವರನ್ನು 20 ಆಟಗಾರರ ಮುಖ್ಯ ಡ್ರಾದಲ್ಲಿ ಸೇರಿಸಲಾಗಿದೆ. ಇದಕ್ಕೂ ಮುನ್ನ, ಪೋಲೆಂಡ್ನ ಕಾಮಿಲ್ ಮಕ್ಜಾಕ್ ಪಂದ್ಯಾವಳಿಯಿಂದ ಹಿಂದೆ ಸರಿದ ನಂತರ ಭಾರತದ ನಂಬರ್ 1 ಸಿಂಗಲ್ಸ್ ಆಟಗಾರ ಪ್ರಜ್ನೇಶ್ ಪುರುಷರ ಡ್ರಾದಲ್ಲಿ ಸ್ಥಾನ ಗಳಿಸುವಲ್ಲಿ ಯಶಸ್ವಿಯಾದರು.
ಭಾರತದ ಡೇವಿಸ್ ಕಪ್ ಆಟಗಾರ ಮತ್ತು ದಕ್ಷಿಣ ಏಷ್ಯಾ ಕ್ರೀಡಾಕೂಟದಲ್ಲಿ ಚಿನ್ನದ ಪದಕ ವಿಜೇತ ರಾಮ್ಕುಮಾರ್ ರಾಮನಾಥನ್ ಕೂಡ ಪಂದ್ಯಾವಳಿಗಾಗಿ ವೈಲ್ಡ್ಕಾರ್ಡ್ ಮೂಲಕ ಪುರುಷರ ಸಿಂಗಲ್ಸ್ ಮುಖ್ಯ ಡ್ರಾದಲ್ಲಿ ಸ್ಥಾನ ಪಡೆದಿದ್ದಾರೆ.
ಮಹಾರಾಷ್ಟ್ರ ರಾಜ್ಯ ಲಾನ್ ಟೆನಿಸ್ ಅಸೋಸಿಯೇಶನ್ನಲ್ಲಿ (ಎಂಎಸ್ಎಲ್ಟಿಎ) ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಘೋಷಣೆ ಮಾಡಲಾಗಿದೆ.
22 ವರ್ಷದ ನಾಗಲ್ ಪ್ರಸ್ತುತ ವಿಶ್ವದ 131 ನೇ ಶ್ರೇಯಾಂಕ ಹೊಂದಿದ್ದಾರೆ. 2019 ರ ಯುಎಸ್ ಓಪನ್ನಲ್ಲಿ ಮೊದಲ ಬಾರಿಗೆ ಗ್ರ್ಯಾಂಡ್ ಸ್ಲ್ಯಾಮ್ನಲ್ಲಿ ಆಡುವ ನಾಗಲ್, ಮೊದಲ ಸುತ್ತಿನಲ್ಲಿ ಶ್ರೇಷ್ಠ ಟೆನಿಸ್ ಆಟಗಾರ ರೋಜರ್ ಫೆಡರರ್ಗೆ ಸವಾಲು ಹಾಕುವ ಮೂಲಕ ಒಂದು ಸೆಟ್ ಗೆದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 