ಶಿಕ್ಷಕ ಬಸವರಾಜಗೆ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ
Teacher Basavaraj awarded Shiksha Ratna Award
ಬೀಳಗಿ 10 : ತಾಲೂಕು ಕುಂದರಗಿ ಗ್ರಾಮದ ರಾಮಲಿಂಗೇಶ್ವರ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜ ದಾವಣಗೆರೆಗೆ "ಶಿಕ್ಷಣ ರತ್ನ ಪ್ರಶಸ್ತಿ" ಲಭಿಸಿದೆ. ಧಾರವಾಡದ ಪ್ರತಿಫಲ ಫೌಂಡೇಶನ್ ಇವರ ಸಹಯೋಗದಲ್ಲಿ ದಿನಾಂಕ -9-5-2026 ಶನಿವಾರದಂದು ಆಲೂರು ವೆಂಕಟರಾವ್ ಸಭಾಭವನದಲ್ಲಿ ಆಯೋಜಿಸಿದ್ದ ಟ್ರಸ್ಟ್ನ ಪ್ರಥಮ ವಾರ್ಷಿಕೋತ್ಸವ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬಸವರಾಜ ದಾವಣಗೆರೆ ಅವರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಗಮನಾರ್ಹ ಸೇವೆ ಹಾಗೂ ಸಂಘಟನೆ, ಸಮಾಜ ಸೇವೆಯಲ್ಲಿ ಅವರ ಸಕ್ರೀಯ ಪಾಲ್ಗೊಳ್ಳುವಿಕೆಯನ್ನು ಗುರುತಿಸಿ ಗಣ್ಯರ ಸಮ್ಮುಖದಲ್ಲಿ ಈ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ನ ಅಧ್ಯಕ್ಷರಾದ ಪೂಜಾ ಬಡಿಗೇರ ಕಾರ್ಯದರ್ಶಿ ಪವಿತ್ರಾ ಬಡಿಗೇರ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸುಮಂಗಲಿ ಸೇವಾಶ್ರಮದ ಎಸ್.ಜಿ ಸುಶೀಲಮ್ಮ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 